ರಾಜ್ಯ

ಎಸ್‌ಸಿ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ನಿರಾಕರಣೆ : ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು : ಪರಿಶಿಷ್ಟ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದಲ್ಲಿ ಶಾಸಕರ ಭವನದ ಸಭಾಂಗಣದಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಎಸ್.ಸಿ. ಎಸ್.ಟಿ ನೌಕರರ ಸಂಘಟನೆಗಳ ಮುಖಂಡರ ಸಭೆ ನಡೆಯಿತು.

ಪಿಟಿಸಿಎಲ್ ಕಾಯ್ದೆ ಸಮರ್ಪಕ ಅನುಷ್ಠಾನ, ಪರಿಶಿಷ್ಟರಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವಲ್ಲಿ ಆಗುತ್ತಿರುವ ತಾರತಮ್ಯ, ಒಳಮೀಸಲಾತಿ ಸೇರಿದಂತೆ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಗಹನವಾಗಿ ಚರ್ಚೆ ನಡೆಸಿದರು.

ಡಿ.ಎಸ್. ವೀರಯ್ಯ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ. ದಲಿತರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ನ್ಯಾಯ ಸಿಗುತ್ತಿಲ್ಲ ಎಂದು ಏಐಸಿಸಿ ಅಧ್ಯಕ್ಷ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇದು ಸಮಸ್ಯೆಯ ಗಂಭೀರತೆಯನ್ನು ಸೂಚಿಸುತ್ತದೆ. ಇದನ್ನು ವಿಳಂಬ ಮಾಡದೆ ಪರಿಹರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ. ಚಂದ್ರಶೇಖರಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಡ್ತಿ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಮುಖ್ಯಮಂತ್ರಿ ಅವರು ಈ ಕುರಿತು ಗಮನಹರಿಸಿಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 80 ಎಸ್ ಸಿ/ಎಸ್ ಟಿ ನೌಕರರಿಗೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನಿರಾಕರಿಸಲಾಗಿದೆ. ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು ಎಂದರು.

ಮಾಜಿ ಸಚಿವೆ, ಸಾಹಿತಿ ಬಿ.ಟಿ. ಲಲಿತಾ ನಾಯಕ್‌ ಮಾತನಾಡಿ, ಮನುಷ್ಯ ಉನ್ನತ ಮಟ್ಟಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಸಮಾನತೆ ಬಗ್ಗೆ ಚಿಂತನೆ ನಡೆಯಬೇಕು. ಸಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಗಮನಹರಿಸಬೇಕು. ಪ್ರತಿಯೊಬ್ಬ ವ್ಯಕ್ತಿ ಉನ್ನತಮಟ್ಟಕ್ಕೆ ಏರಲು ಅಂಬೇಡ್ಕರ್‌ ಅವರ ಚಿಂತನೆಗಳನ್ನು ಓದಿ ಮನನ ಮಾಡಿಕೊಳ್ಳಬೇಕು. ದೇವಾಸ್ಥಾನಗಳ ಜಾಗದಲ್ಲಿ ಗ್ರಂಥಾಲಯಗಳಿರಬೇಕು. ಬಾಬಾ ಸಾಹೇಬರ ಬೆಳಕನ್ನು ಪ್ರತಿಯೊಬ್ಬರೂ ಕಾಣಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

10 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

10 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

10 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

10 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

22 hours ago