ಬಳ್ಳಾರಿ: ವಿಶ್ವ ಪ್ರಸಿದ್ಧ ಹಂಪಿಗೆ ಬರುವ ಪ್ರವಾಸಿಗರಿಗೆ ಪುರಾತತ್ವ ಸರ್ವೇಕ್ಷಣ ಇಲಾಖೆ ಗುಡ್ನ್ಯೂಸ್ ನೀಡಿದ್ದು, ಇನ್ನು ಮುಂದೆ ಕ್ಯೂ ಆರ್ ಕೋಡ್ಗೆ ಸ್ಕ್ಯಾನ್ ಮಾಡಿ ಸಂಗೀತದ ಸ್ವಾದವನ್ನು ಸವಿಯಬಹುದಾಗಿದೆ.
ಭಾರತದ ಪುರಾತತ್ವ ಸರ್ವೇಕ್ಷಣ ಇಲಾಖೆ ವತಿಯಿಂದ ಹಂಪಿಯ ವಿಜಯ ವಿಠಲ ದೇವಸ್ಥಾನದ ಸಂಗೀತ ಮಂಟಪದಲ್ಲಿ ಸಂಗೀತದ ಕಂಬಗಳಿಗೆ ಪ್ರಾಯೋಗಿಕವಾಗಿ ಕ್ಯೂ ಆರ್ ಕೋಡನ್ನು ಅಳವಡಿಸಲಾಗಿದೆ.
ಪ್ರವಾಸಿಗರು ಕ್ಯೂ ಆರ್ ಕೋಡ್ಗೆ ಸ್ಕ್ಯಾನ್ ಮಾಡುವುದರ ಮೂಲಕ ಸಂಗೀತವನ್ನು ಕೇಳುವ ವ್ಯವಸ್ಥೆ ಮಾಡಲಾಗಿದೆ.
ಇನ್ನು ಇಲ್ಲಿ ಪ್ರವಾಸಿಗರ ಆಸಕ್ತಿ ಮತ್ತು ಅಭಿರುಚಿಗೆ ತಕ್ಕಂತೆ ಮುಂದಿನ ದಿನಗಳಲ್ಲಿ ಪ್ರತಿಯೊಂದು ಕಂಬಕ್ಕೆ ಕ್ಯೂ ಆರ್ ಕೋಡ್ ಅಳವಡಿಸುವ ಪ್ಲಾನ್ ಮಾಡಲಾಗಿದೆ.
ಸ್ಥಳೀಯರು ಹಾಗೂ ಪ್ರವಾಸಿಗರ ಸಲಹೆಯ ಮೇರೆಗೆ ಈ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರಿಂದ ಹಂಪಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ ಎನ್ನಲಾಗಿದೆ.
ಈ ಮೂಲಕ ಪ್ರವಾಸೋದ್ಯಮಕ್ಕೆ ಮತ್ತಷ್ಟು ಆದಾಯ ಬರಲಿದ್ದು, ಮುಂದಿನ ದಿನಗಳಲ್ಲಿ ಹಂಪಿಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲು ಪುರಾತತ್ವ ಸರ್ವೇಕ್ಷಣ ಇಲಾಖೆ ಹೆಜ್ಜೆ ಇಟ್ಟಿದೆ ಎನ್ನಲಾಗಿದೆ.
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…
ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…
ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…