ಬಳ್ಳಾರಿ: ವಿಶ್ವ ಪ್ರಸಿದ್ಧ ಹಂಪಿಗೆ ಬರುವ ಪ್ರವಾಸಿಗರಿಗೆ ಪುರಾತತ್ವ ಸರ್ವೇಕ್ಷಣ ಇಲಾಖೆ ಗುಡ್ನ್ಯೂಸ್ ನೀಡಿದ್ದು, ಇನ್ನು ಮುಂದೆ ಕ್ಯೂ ಆರ್ ಕೋಡ್ಗೆ ಸ್ಕ್ಯಾನ್ ಮಾಡಿ ಸಂಗೀತದ ಸ್ವಾದವನ್ನು ಸವಿಯಬಹುದಾಗಿದೆ.
ಭಾರತದ ಪುರಾತತ್ವ ಸರ್ವೇಕ್ಷಣ ಇಲಾಖೆ ವತಿಯಿಂದ ಹಂಪಿಯ ವಿಜಯ ವಿಠಲ ದೇವಸ್ಥಾನದ ಸಂಗೀತ ಮಂಟಪದಲ್ಲಿ ಸಂಗೀತದ ಕಂಬಗಳಿಗೆ ಪ್ರಾಯೋಗಿಕವಾಗಿ ಕ್ಯೂ ಆರ್ ಕೋಡನ್ನು ಅಳವಡಿಸಲಾಗಿದೆ.
ಪ್ರವಾಸಿಗರು ಕ್ಯೂ ಆರ್ ಕೋಡ್ಗೆ ಸ್ಕ್ಯಾನ್ ಮಾಡುವುದರ ಮೂಲಕ ಸಂಗೀತವನ್ನು ಕೇಳುವ ವ್ಯವಸ್ಥೆ ಮಾಡಲಾಗಿದೆ.
ಇನ್ನು ಇಲ್ಲಿ ಪ್ರವಾಸಿಗರ ಆಸಕ್ತಿ ಮತ್ತು ಅಭಿರುಚಿಗೆ ತಕ್ಕಂತೆ ಮುಂದಿನ ದಿನಗಳಲ್ಲಿ ಪ್ರತಿಯೊಂದು ಕಂಬಕ್ಕೆ ಕ್ಯೂ ಆರ್ ಕೋಡ್ ಅಳವಡಿಸುವ ಪ್ಲಾನ್ ಮಾಡಲಾಗಿದೆ.
ಸ್ಥಳೀಯರು ಹಾಗೂ ಪ್ರವಾಸಿಗರ ಸಲಹೆಯ ಮೇರೆಗೆ ಈ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರಿಂದ ಹಂಪಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ ಎನ್ನಲಾಗಿದೆ.
ಈ ಮೂಲಕ ಪ್ರವಾಸೋದ್ಯಮಕ್ಕೆ ಮತ್ತಷ್ಟು ಆದಾಯ ಬರಲಿದ್ದು, ಮುಂದಿನ ದಿನಗಳಲ್ಲಿ ಹಂಪಿಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲು ಪುರಾತತ್ವ ಸರ್ವೇಕ್ಷಣ ಇಲಾಖೆ ಹೆಜ್ಜೆ ಇಟ್ಟಿದೆ ಎನ್ನಲಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…