ರಾಜ್ಯ

ದಸರಾ ರಜೆಯಿಂದ ವಂಚಿತರಾದ ಶಾಲಾ ಶಿಕ್ಷಕರು: ಕಾರಣ ಇಷ್ಟೇ

ಬೆಂಗಳೂರು: ಸೆಪ್ಟೆಂಬರ್.22ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾಲಾ ಶಿಕ್ಷಕರು ದಸರಾ ರಜೆಯಿಂದ ವಂಚಿತರಾಗಲಿದ್ದಾರೆ.

ದಸರಾ ರಜೆ ಹೋಗಲಿ ಸಮೀಕ್ಷೆಯಲ್ಲಿ ಭಾಗಿಯಾಗುತ್ತಿರುವ ಶಿಕ್ಷಕರಿಗೆ ಗೌರವಧನವನ್ನು ನೀಡುವುದಿಲ್ಲ. ಇದರ ಜೊತೆಗೆ ಗಳಿಕೆ ರಜೆಯೂ ಇಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ನಡೆಗೆ ಶಿಕ್ಷಕ ವೃಂದವು ಅಸಮಾಧಾನ ವ್ಯಕ್ತಪಡಿಸಿದೆ.

ಸಮೀಕ್ಷೆಯಲ್ಲಿ ಭಾಗಿಯಾಗಲಿರುವ 1.70 ಭಾಷಾ ಶಿಕ್ಷಕರಿಗೆ ಸೆ.19ರವರೆಗೂ ತರಬೇತಿ ನೀಡಲಾಗುವುದು. ರಜಾ ದಿನಗಳಲ್ಲಿ ಕೆಲಸ ಮಾಡಿದರೆ ಗಳಿಕಾ ರಜೆ ಸೌಲಭ್ಯ ನೀಡಬೇಕೆಂಬ ನಿಯಮವಿದೆ. ಹೀಗಿದ್ದರೂ ಸಮೀಕ್ಷೆಯಲ್ಲಿ ಭಾಗಿಯಾಗುವ ಶಿಕ್ಷಕರಿಗೆ ಗಳಿಕೆ ರಜೆ ನೀಡದಿರಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ 46,757 ಸರ್ಕಾರಿ ಶಾಲೆಗಳಿದ್ದು, 1.77 ಲಕ್ಷ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 2025-26 ರಲ್ಲಿ 123 ರಜೆಗಳಿದ್ದು, 242 ಶಾಲಾ ಕರ್ತವ್ಯ ದಿನಗಳಿವೆ. ಹೀಗಿದ್ದರೂ ಸರ್ಕಾರ ನಮ್ಮ ಮೇಲೆ ಯಾಕೆ ಈ ರೀತಿ ಕೋಪ ತೀರಿಸಿಕೊಳ್ಳುತ್ತಿದೆ ಎನ್ನುವುದು ಅರ್ಥವಾಗುತ್ತಿಲ್ಲ ಎನ್ನುತ್ತಿದ್ದಾರೆ ಶಿಕ್ಷಕರು. ಈಗಲೂ ಕಾಲ ಮಿಂಚಿಲ್ಲ ಶಿಕ್ಷಕರ ಮೇಲೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಶಿಕ್ಷಕ ಸಮುದಾಯ ಆಗ್ರಹಿಸಿದೆ.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

18 mins ago

ಇರಾನ್‌ನ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

1 hour ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

2 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

2 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

3 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

3 hours ago