ರಾಜ್ಯ

ದಸರಾ ರಜೆಯಿಂದ ವಂಚಿತರಾದ ಶಾಲಾ ಶಿಕ್ಷಕರು: ಕಾರಣ ಇಷ್ಟೇ

ಬೆಂಗಳೂರು: ಸೆಪ್ಟೆಂಬರ್.22ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾಲಾ ಶಿಕ್ಷಕರು ದಸರಾ ರಜೆಯಿಂದ ವಂಚಿತರಾಗಲಿದ್ದಾರೆ.

ದಸರಾ ರಜೆ ಹೋಗಲಿ ಸಮೀಕ್ಷೆಯಲ್ಲಿ ಭಾಗಿಯಾಗುತ್ತಿರುವ ಶಿಕ್ಷಕರಿಗೆ ಗೌರವಧನವನ್ನು ನೀಡುವುದಿಲ್ಲ. ಇದರ ಜೊತೆಗೆ ಗಳಿಕೆ ರಜೆಯೂ ಇಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ನಡೆಗೆ ಶಿಕ್ಷಕ ವೃಂದವು ಅಸಮಾಧಾನ ವ್ಯಕ್ತಪಡಿಸಿದೆ.

ಸಮೀಕ್ಷೆಯಲ್ಲಿ ಭಾಗಿಯಾಗಲಿರುವ 1.70 ಭಾಷಾ ಶಿಕ್ಷಕರಿಗೆ ಸೆ.19ರವರೆಗೂ ತರಬೇತಿ ನೀಡಲಾಗುವುದು. ರಜಾ ದಿನಗಳಲ್ಲಿ ಕೆಲಸ ಮಾಡಿದರೆ ಗಳಿಕಾ ರಜೆ ಸೌಲಭ್ಯ ನೀಡಬೇಕೆಂಬ ನಿಯಮವಿದೆ. ಹೀಗಿದ್ದರೂ ಸಮೀಕ್ಷೆಯಲ್ಲಿ ಭಾಗಿಯಾಗುವ ಶಿಕ್ಷಕರಿಗೆ ಗಳಿಕೆ ರಜೆ ನೀಡದಿರಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ 46,757 ಸರ್ಕಾರಿ ಶಾಲೆಗಳಿದ್ದು, 1.77 ಲಕ್ಷ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 2025-26 ರಲ್ಲಿ 123 ರಜೆಗಳಿದ್ದು, 242 ಶಾಲಾ ಕರ್ತವ್ಯ ದಿನಗಳಿವೆ. ಹೀಗಿದ್ದರೂ ಸರ್ಕಾರ ನಮ್ಮ ಮೇಲೆ ಯಾಕೆ ಈ ರೀತಿ ಕೋಪ ತೀರಿಸಿಕೊಳ್ಳುತ್ತಿದೆ ಎನ್ನುವುದು ಅರ್ಥವಾಗುತ್ತಿಲ್ಲ ಎನ್ನುತ್ತಿದ್ದಾರೆ ಶಿಕ್ಷಕರು. ಈಗಲೂ ಕಾಲ ಮಿಂಚಿಲ್ಲ ಶಿಕ್ಷಕರ ಮೇಲೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಶಿಕ್ಷಕ ಸಮುದಾಯ ಆಗ್ರಹಿಸಿದೆ.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

39 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

44 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

4 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago