ರಾಜ್ಯ

ದಸರಾ ರಜೆಯಿಂದ ವಂಚಿತರಾದ ಶಾಲಾ ಶಿಕ್ಷಕರು: ಕಾರಣ ಇಷ್ಟೇ

ಬೆಂಗಳೂರು: ಸೆಪ್ಟೆಂಬರ್.22ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾಲಾ ಶಿಕ್ಷಕರು ದಸರಾ ರಜೆಯಿಂದ ವಂಚಿತರಾಗಲಿದ್ದಾರೆ.

ದಸರಾ ರಜೆ ಹೋಗಲಿ ಸಮೀಕ್ಷೆಯಲ್ಲಿ ಭಾಗಿಯಾಗುತ್ತಿರುವ ಶಿಕ್ಷಕರಿಗೆ ಗೌರವಧನವನ್ನು ನೀಡುವುದಿಲ್ಲ. ಇದರ ಜೊತೆಗೆ ಗಳಿಕೆ ರಜೆಯೂ ಇಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ನಡೆಗೆ ಶಿಕ್ಷಕ ವೃಂದವು ಅಸಮಾಧಾನ ವ್ಯಕ್ತಪಡಿಸಿದೆ.

ಸಮೀಕ್ಷೆಯಲ್ಲಿ ಭಾಗಿಯಾಗಲಿರುವ 1.70 ಭಾಷಾ ಶಿಕ್ಷಕರಿಗೆ ಸೆ.19ರವರೆಗೂ ತರಬೇತಿ ನೀಡಲಾಗುವುದು. ರಜಾ ದಿನಗಳಲ್ಲಿ ಕೆಲಸ ಮಾಡಿದರೆ ಗಳಿಕಾ ರಜೆ ಸೌಲಭ್ಯ ನೀಡಬೇಕೆಂಬ ನಿಯಮವಿದೆ. ಹೀಗಿದ್ದರೂ ಸಮೀಕ್ಷೆಯಲ್ಲಿ ಭಾಗಿಯಾಗುವ ಶಿಕ್ಷಕರಿಗೆ ಗಳಿಕೆ ರಜೆ ನೀಡದಿರಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ 46,757 ಸರ್ಕಾರಿ ಶಾಲೆಗಳಿದ್ದು, 1.77 ಲಕ್ಷ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 2025-26 ರಲ್ಲಿ 123 ರಜೆಗಳಿದ್ದು, 242 ಶಾಲಾ ಕರ್ತವ್ಯ ದಿನಗಳಿವೆ. ಹೀಗಿದ್ದರೂ ಸರ್ಕಾರ ನಮ್ಮ ಮೇಲೆ ಯಾಕೆ ಈ ರೀತಿ ಕೋಪ ತೀರಿಸಿಕೊಳ್ಳುತ್ತಿದೆ ಎನ್ನುವುದು ಅರ್ಥವಾಗುತ್ತಿಲ್ಲ ಎನ್ನುತ್ತಿದ್ದಾರೆ ಶಿಕ್ಷಕರು. ಈಗಲೂ ಕಾಲ ಮಿಂಚಿಲ್ಲ ಶಿಕ್ಷಕರ ಮೇಲೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಶಿಕ್ಷಕ ಸಮುದಾಯ ಆಗ್ರಹಿಸಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

7 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

7 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

8 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

8 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

8 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

8 hours ago