ರಾಜ್ಯ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆ ಬಳಕೆಗೆ ವಿರೋಧ: ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಮನೆಗೆ ದಸಂಸ ಮುತ್ತಿಗೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗಳಿಗೆ ಬಳಸುವ ಮೂಲಕ ದಲಿತರಿಗೆ ವಿಶ್ವಾಸ ದ್ರೋಹ ಬಗೆಯುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಮನೆಗೆ ಬುಧವಾರ ಮುತ್ತಿಗೆ ಹಾಕಿದರು.

ದಲಿತರನ್ನು ಆರ್ಥಿಕವಾಗಿ ಬಲಪಡಿಸುವ ಉದ್ದೇಶದಿಂದ ವಿಶೇಷವಾಗಿ ಮೀಸಲಿರಿಸಿರುವ ಹಣವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸುವುದು ಸರ್ಕಾರದ ನಯವಂಚಕತನಕ್ಕೆ ಸಾಕ್ಷಿಯಾಗಿದೆ. ದಲಿತರ ಮೀಸಲು ಹಣ ದುರುಪಯೋಗವಾಗದಂತೆ ತಡೆಯಲು ಸರ್ಕಾರ ಕೂಡಲೆ 7 ಸಿ. ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ದಸಂಸ ಹಿರಿಯ ಮುಖಂಡ ಇಂದೂಧರ ಹೊನ್ನಾಪುರ, ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಇರುವ ನಿಗಮಗಳಲ್ಲಿರುವ ದಲಿತರ ಮೀಸಲು ಹಣ ಕಾಯಲು ಕಾನೂನುಬದ್ದವಾದ ಕಾವಲು ಸಮಿತಿಗಳು ರಚನೆ ಆಗಬೇಕು, ಹೊರಗುತ್ತಿಗೆ ನೇಮಕಾತಿ ಮೀಸಲಾತಿಗೆ ವಿದಿಸಿರುವ ಅವೈಜ್ಞಾನಿಕ ನಿಯಮಗಳಿಗೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ದಸಂಸ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, ಸಂವಿಧಾನ ವಿರೋಧಿ ಮನಸ್ಥಿತಿಗಳನ್ನು ದೂರ ಇಡುವ ಕಾರಣದಿಂದ ಅನಿವಾರ್ಯವಾಗಿ ಕಾಂಗ್ರೆಸ್ ಬೆಂಬಲಿಸಿದ ದಲಿತರೆ ಇಂದು ಪಶ್ಚಾತ್ತಾಪ ಪಡುವಂತಾಗಿದೆ, ಕೂಡಲೆ ಮುಖ್ಯಮಂತ್ರಿಗಳು ಸರ್ಕಾರದಿಂದ ಆಗುತ್ತಿರುವ ಲೋಪಗಳನ್ನು ಸರಿಪಡಿಸಬೇಕು ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯವಾಗಿದೆ ಎಂದು ಎಚ್ಚರಿಸಿದರು.

ಪಿ.ಟಿ.ಸಿ.ಎಲ್ ಕಾಯ್ದೆ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದು, ಪರಿಶಿಷ್ಟರ ಮಕ್ಕಳ ಮೆರಿಟ್ ಹಣ ಕಡಿತಗೊಳಿಸಿರುವುದು, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಸಂಶೋಧನಾ ಮಾಡಲು ಇದ್ದ ಪ್ರಬುದ್ಧ ಯೋಜನೆ ರದ್ದುಗೊಳಿಸಿರುವುದು, ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡದೇ ಇರುವುದು, ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡದಿರುವುದು, ಗ್ರಾಮ ಸಹಾಯಕರನ್ನು ಖಾಯಂ ಮಾಡದಿರುವುದು, ದಲಿತ ಹೋರಾಟಗಾರರ ಮೇಲಿನ ಪ್ರಕರಣ ವಜಾ ಆಗದಿರುವುದುನ್ನು ಪ್ರತಿಭಟನಾಕಾರರು ಖಂಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಎಚ್.ಸಿ ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹೋರಾಟಗಾರರಾದ ಎನ್.ವೆಂಕಟೇಶ್, ವಿ.ನಾಗರಾಜ್, ಮರಿಯಪ್ಪಹಳ್ಳಿ, ಹುಲ್ಕೆರೆ ಮಹದೇವ್, ರಮೇಶ್ ಡಾಕುಳಕಿ, ಗಂಗನಂಜಯ್ಯ, ಬೆಟ್ಟಯ್ಯಕೋಟೆ, ಆಲಗೂಡುಶಿವಕುಮಾರ್, ಸಿ.ಜಿ.ಗಂಗಪ್ಪ, ಆನಂದ್, ಹಾರೋಹಳ್ಳಿ ರವಿ, ಬಾಲಕೃಷ್ಣ, ಯರಿಯೂರು ರಾಜಣ್ಣ, ಬಿ.ಡಿ.ಶಿವಬುದ್ದಿ, ನಂಜುಂಡಸ್ವಾಮಿ, ಶಂಭುಲಿಂಗ ಸ್ವಾಮಿ, ನಿಂಗರಾಜು, ಗದಗ್ ವೆಂಕಟೇಶಯ್ಯ, ಮರೆಪ್ಪ ಚಟೇರ್ಕರ್, ನಾಗರತ್ನ, ಜಯಂತಿ, ಜಯಮ್ಮ, ಕೃಷ್ಣಮೂರ್ತಿ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago