ರಾಜ್ಯ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆ ಬಳಕೆಗೆ ವಿರೋಧ: ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಮನೆಗೆ ದಸಂಸ ಮುತ್ತಿಗೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗಳಿಗೆ ಬಳಸುವ ಮೂಲಕ ದಲಿತರಿಗೆ ವಿಶ್ವಾಸ ದ್ರೋಹ ಬಗೆಯುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಮನೆಗೆ ಬುಧವಾರ ಮುತ್ತಿಗೆ ಹಾಕಿದರು.

ದಲಿತರನ್ನು ಆರ್ಥಿಕವಾಗಿ ಬಲಪಡಿಸುವ ಉದ್ದೇಶದಿಂದ ವಿಶೇಷವಾಗಿ ಮೀಸಲಿರಿಸಿರುವ ಹಣವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸುವುದು ಸರ್ಕಾರದ ನಯವಂಚಕತನಕ್ಕೆ ಸಾಕ್ಷಿಯಾಗಿದೆ. ದಲಿತರ ಮೀಸಲು ಹಣ ದುರುಪಯೋಗವಾಗದಂತೆ ತಡೆಯಲು ಸರ್ಕಾರ ಕೂಡಲೆ 7 ಸಿ. ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ದಸಂಸ ಹಿರಿಯ ಮುಖಂಡ ಇಂದೂಧರ ಹೊನ್ನಾಪುರ, ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಇರುವ ನಿಗಮಗಳಲ್ಲಿರುವ ದಲಿತರ ಮೀಸಲು ಹಣ ಕಾಯಲು ಕಾನೂನುಬದ್ದವಾದ ಕಾವಲು ಸಮಿತಿಗಳು ರಚನೆ ಆಗಬೇಕು, ಹೊರಗುತ್ತಿಗೆ ನೇಮಕಾತಿ ಮೀಸಲಾತಿಗೆ ವಿದಿಸಿರುವ ಅವೈಜ್ಞಾನಿಕ ನಿಯಮಗಳಿಗೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ದಸಂಸ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, ಸಂವಿಧಾನ ವಿರೋಧಿ ಮನಸ್ಥಿತಿಗಳನ್ನು ದೂರ ಇಡುವ ಕಾರಣದಿಂದ ಅನಿವಾರ್ಯವಾಗಿ ಕಾಂಗ್ರೆಸ್ ಬೆಂಬಲಿಸಿದ ದಲಿತರೆ ಇಂದು ಪಶ್ಚಾತ್ತಾಪ ಪಡುವಂತಾಗಿದೆ, ಕೂಡಲೆ ಮುಖ್ಯಮಂತ್ರಿಗಳು ಸರ್ಕಾರದಿಂದ ಆಗುತ್ತಿರುವ ಲೋಪಗಳನ್ನು ಸರಿಪಡಿಸಬೇಕು ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯವಾಗಿದೆ ಎಂದು ಎಚ್ಚರಿಸಿದರು.

ಪಿ.ಟಿ.ಸಿ.ಎಲ್ ಕಾಯ್ದೆ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದು, ಪರಿಶಿಷ್ಟರ ಮಕ್ಕಳ ಮೆರಿಟ್ ಹಣ ಕಡಿತಗೊಳಿಸಿರುವುದು, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಸಂಶೋಧನಾ ಮಾಡಲು ಇದ್ದ ಪ್ರಬುದ್ಧ ಯೋಜನೆ ರದ್ದುಗೊಳಿಸಿರುವುದು, ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡದೇ ಇರುವುದು, ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡದಿರುವುದು, ಗ್ರಾಮ ಸಹಾಯಕರನ್ನು ಖಾಯಂ ಮಾಡದಿರುವುದು, ದಲಿತ ಹೋರಾಟಗಾರರ ಮೇಲಿನ ಪ್ರಕರಣ ವಜಾ ಆಗದಿರುವುದುನ್ನು ಪ್ರತಿಭಟನಾಕಾರರು ಖಂಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಎಚ್.ಸಿ ಮಹದೇವಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹೋರಾಟಗಾರರಾದ ಎನ್.ವೆಂಕಟೇಶ್, ವಿ.ನಾಗರಾಜ್, ಮರಿಯಪ್ಪಹಳ್ಳಿ, ಹುಲ್ಕೆರೆ ಮಹದೇವ್, ರಮೇಶ್ ಡಾಕುಳಕಿ, ಗಂಗನಂಜಯ್ಯ, ಬೆಟ್ಟಯ್ಯಕೋಟೆ, ಆಲಗೂಡುಶಿವಕುಮಾರ್, ಸಿ.ಜಿ.ಗಂಗಪ್ಪ, ಆನಂದ್, ಹಾರೋಹಳ್ಳಿ ರವಿ, ಬಾಲಕೃಷ್ಣ, ಯರಿಯೂರು ರಾಜಣ್ಣ, ಬಿ.ಡಿ.ಶಿವಬುದ್ದಿ, ನಂಜುಂಡಸ್ವಾಮಿ, ಶಂಭುಲಿಂಗ ಸ್ವಾಮಿ, ನಿಂಗರಾಜು, ಗದಗ್ ವೆಂಕಟೇಶಯ್ಯ, ಮರೆಪ್ಪ ಚಟೇರ್ಕರ್, ನಾಗರತ್ನ, ಜಯಂತಿ, ಜಯಮ್ಮ, ಕೃಷ್ಣಮೂರ್ತಿ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

16 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

19 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

25 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

29 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

37 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago