ರಾಜ್ಯ

ಎಸ್‌ಸಿಎಸ್‌ಪಿ ಅನುದಾನ :ತ್ವರಿತ ಗುರಿ ಸಾಧನೆಗೆ ಮಹದೇವಪ್ಪ ಸೂಚನೆ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಶನಿವಾರ ವಿಧಾನಸೌಧದಲ್ಲಿ SCSP ನೋಡಲ್ ಅಧಿಕಾರಿಗಳ ಸಭೆ ನಡೆಸಿ, ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯ ಒಳಗಾಗಿ SCSP ಅನುದಾನವನ್ನು ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ flag ship ಯೋಜನೆಗಳನ್ನು ರೂಪಿಸಬೇಕೆಂದು ಸೂಚಿಸಿದರು.

ಸಹಕಾರಿ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟರ ನೊಂದಾವಣೆ ಮಾಡಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ SCSP ಹಣವನ್ನು ಪಡೆಯುವ ಇಲಾಖೆಗಳು ಸುಮ್ಮನೇ ಹಣ ಖರ್ಚು ಮಾಡದೇ ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ಮಾಡುವ ಮೂಲಕ ಪರಿಶಿಷ್ಟ ಸಮುದಾಯದ ಹಣ ಸದ್ಬಳಕೆಯತ್ತ ಗಮನ ಹರಿಸಬೇಕೆಂದು ತಿಳಿಸಿದರು.

ಅಧಿಕಾರಿಗಳು ಮೌಲ್ಯಮಾಪನದ ಕಡೆ ಹೆಚ್ಚು ಗಮನ ಹರಿಸಿ, ವಸತಿ ಇಲ್ಲದ ಜನರು ಎಷ್ಟು ಮಂದಿ ಇದ್ದಾರೆ, ಕೃಷಿಯಲ್ಲಿ ತೊಂದರೆ ಅನುಭವಿಸುತ್ತಿರುವ ಪರಿಶಿಷ್ಟ ಸಮುದಾಯದವರು ಎಷ್ಟು ಮಂದಿ ಇದ್ದಾರೆ ಮತ್ತು ಯಾರಿಗೆಲ್ಲಾ ನಾವು ಉದ್ಯಮಗಳನ್ನು ಮಾಡಲು, ಕೌಶಲ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂಬುದರ ಕುರಿತು ಅಧಿಕಾರಿ ಮಿತ್ರರು ನೇರವಾಗಿ ಜನರ ಬಳಿ ಹೋಗಿ ವಾಸ್ತವಗಳನ್ನು ಅರಿಬೇಕೆಂದು ತಿಳಿಸಿದರು.

ಇನ್ನು ಪರಿಶಿಷ್ಟ ಸಮುದಾಯದವರಿಗೆ ಮನೆ ಕಟ್ಟಲು 5 ಲಕ್ಷ ರೂಪಾಯಿಯ unit fund ಅನ್ನು ನಿಗದಿಗೊಳಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಉನ್ನತ ಶಿಕ್ಷಣ ಮಾಡುತ್ತಿರುವ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಅವರಿಗೆ ಬರಬೇಕಾದ ವಿದ್ಯಾರ್ಥಿ ವೇತನವನ್ನು ನಿಗದಿತ ಸಮಯಕ್ಕೆ ಕಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ಸಂದರ್ಭದಲ್ಲಿ ಕೆಲವೊಂದು ಗೊಂದಲ ಉಂಟಾಗಿದ್ದು, ಈ ಗೊಂದಲವನ್ನು ಶೀಘ್ರದಲ್ಲಿ ಪರಿಹಾರ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು.

ಇನ್ನು ಸರ್ಕಾರದ ಎಲ್ಲಾ ಇಲಾಖೆಗಳೂ ಕೂಡಾ ಪರಿಶಿಷ್ಟರ ಹಣವನ್ನು ಸಾಮಾಜಿಕ ಖರ್ಚು ( Social Expenditure) ಎಂದು ಭಾವಿಸದೇ ಅದನ್ನು ಸಾಮಾಜಿಕ ಹೂಡಿಕೆ ( Social Investment ) ಆಗಿ ವಿನಿಯೋಗಿಸಿದರೆ ಮಾತ್ರ ಪರಿಶಿಷ್ಟರ ಏಳಿಗೆ ಸಾಧ್ಯ ಎಂಬುದಾಗಿ ತಿಳಿದರು.

ನಿಗದಿತ ಅವಧಿಯಲ್ಲಿ ಹಣ ಖರ್ಚು ಮಾಡದೇ SCSP/TSP ಕಾಯ್ದೆಯ ಆಶಯಗಳನ್ನು ಮರೆತು, ನಿಯಮಬಾಹಿರವಾಗಿ ವರ್ತಿಸಿದರೆ ಮತ್ತು ಅನುದಾವನ್ನು ಬಳಸುವಲ್ಲಿ ನಿರ್ಲಕ್ಷ್ಯ ತೋರಿದರೆ ಸಮಾಜ ಕಲ್ಯಾಣ ಇಲಾಖೆಯು ಸಿಂಗಲ್ ವಿಂಡೋ ಏಜೆನ್ಸಿ ಮೂಲಕ ಖರ್ಚಾಗದ ಹಣವನ್ನು ಹಿಂಪಡೆದು, ಪರಿಶಿಷ್ಟ ಸಮುದಾಯಗಳಿಗೆ ಪೂರಕ ಯೋಜನೆಗಳನ್ನು ನೀಡಲಿದೆ ಎಂಬ ಸಂಗತಿಯನ್ನು ಪ್ರಮುಖವಾಗಿ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

12 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

12 hours ago