ರಾಜ್ಯ

ಎಸ್‌ಸಿಎಸ್‌ಪಿ ಅನುದಾನ :ತ್ವರಿತ ಗುರಿ ಸಾಧನೆಗೆ ಮಹದೇವಪ್ಪ ಸೂಚನೆ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಶನಿವಾರ ವಿಧಾನಸೌಧದಲ್ಲಿ SCSP ನೋಡಲ್ ಅಧಿಕಾರಿಗಳ ಸಭೆ ನಡೆಸಿ, ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯ ಒಳಗಾಗಿ SCSP ಅನುದಾನವನ್ನು ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ flag ship ಯೋಜನೆಗಳನ್ನು ರೂಪಿಸಬೇಕೆಂದು ಸೂಚಿಸಿದರು.

ಸಹಕಾರಿ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟರ ನೊಂದಾವಣೆ ಮಾಡಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ SCSP ಹಣವನ್ನು ಪಡೆಯುವ ಇಲಾಖೆಗಳು ಸುಮ್ಮನೇ ಹಣ ಖರ್ಚು ಮಾಡದೇ ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ಮಾಡುವ ಮೂಲಕ ಪರಿಶಿಷ್ಟ ಸಮುದಾಯದ ಹಣ ಸದ್ಬಳಕೆಯತ್ತ ಗಮನ ಹರಿಸಬೇಕೆಂದು ತಿಳಿಸಿದರು.

ಅಧಿಕಾರಿಗಳು ಮೌಲ್ಯಮಾಪನದ ಕಡೆ ಹೆಚ್ಚು ಗಮನ ಹರಿಸಿ, ವಸತಿ ಇಲ್ಲದ ಜನರು ಎಷ್ಟು ಮಂದಿ ಇದ್ದಾರೆ, ಕೃಷಿಯಲ್ಲಿ ತೊಂದರೆ ಅನುಭವಿಸುತ್ತಿರುವ ಪರಿಶಿಷ್ಟ ಸಮುದಾಯದವರು ಎಷ್ಟು ಮಂದಿ ಇದ್ದಾರೆ ಮತ್ತು ಯಾರಿಗೆಲ್ಲಾ ನಾವು ಉದ್ಯಮಗಳನ್ನು ಮಾಡಲು, ಕೌಶಲ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂಬುದರ ಕುರಿತು ಅಧಿಕಾರಿ ಮಿತ್ರರು ನೇರವಾಗಿ ಜನರ ಬಳಿ ಹೋಗಿ ವಾಸ್ತವಗಳನ್ನು ಅರಿಬೇಕೆಂದು ತಿಳಿಸಿದರು.

ಇನ್ನು ಪರಿಶಿಷ್ಟ ಸಮುದಾಯದವರಿಗೆ ಮನೆ ಕಟ್ಟಲು 5 ಲಕ್ಷ ರೂಪಾಯಿಯ unit fund ಅನ್ನು ನಿಗದಿಗೊಳಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಉನ್ನತ ಶಿಕ್ಷಣ ಮಾಡುತ್ತಿರುವ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಅವರಿಗೆ ಬರಬೇಕಾದ ವಿದ್ಯಾರ್ಥಿ ವೇತನವನ್ನು ನಿಗದಿತ ಸಮಯಕ್ಕೆ ಕಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ಸಂದರ್ಭದಲ್ಲಿ ಕೆಲವೊಂದು ಗೊಂದಲ ಉಂಟಾಗಿದ್ದು, ಈ ಗೊಂದಲವನ್ನು ಶೀಘ್ರದಲ್ಲಿ ಪರಿಹಾರ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು.

ಇನ್ನು ಸರ್ಕಾರದ ಎಲ್ಲಾ ಇಲಾಖೆಗಳೂ ಕೂಡಾ ಪರಿಶಿಷ್ಟರ ಹಣವನ್ನು ಸಾಮಾಜಿಕ ಖರ್ಚು ( Social Expenditure) ಎಂದು ಭಾವಿಸದೇ ಅದನ್ನು ಸಾಮಾಜಿಕ ಹೂಡಿಕೆ ( Social Investment ) ಆಗಿ ವಿನಿಯೋಗಿಸಿದರೆ ಮಾತ್ರ ಪರಿಶಿಷ್ಟರ ಏಳಿಗೆ ಸಾಧ್ಯ ಎಂಬುದಾಗಿ ತಿಳಿದರು.

ನಿಗದಿತ ಅವಧಿಯಲ್ಲಿ ಹಣ ಖರ್ಚು ಮಾಡದೇ SCSP/TSP ಕಾಯ್ದೆಯ ಆಶಯಗಳನ್ನು ಮರೆತು, ನಿಯಮಬಾಹಿರವಾಗಿ ವರ್ತಿಸಿದರೆ ಮತ್ತು ಅನುದಾವನ್ನು ಬಳಸುವಲ್ಲಿ ನಿರ್ಲಕ್ಷ್ಯ ತೋರಿದರೆ ಸಮಾಜ ಕಲ್ಯಾಣ ಇಲಾಖೆಯು ಸಿಂಗಲ್ ವಿಂಡೋ ಏಜೆನ್ಸಿ ಮೂಲಕ ಖರ್ಚಾಗದ ಹಣವನ್ನು ಹಿಂಪಡೆದು, ಪರಿಶಿಷ್ಟ ಸಮುದಾಯಗಳಿಗೆ ಪೂರಕ ಯೋಜನೆಗಳನ್ನು ನೀಡಲಿದೆ ಎಂಬ ಸಂಗತಿಯನ್ನು ಪ್ರಮುಖವಾಗಿ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

1 hour ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

1 hour ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

1 hour ago

ಓದುಗರ ಪತ್ರ: ಬಂಡಿಪಾಳ್ಯದಲ್ಲಿ ಅಗತ್ಯ ಶೌಚಾಲಯಗಳನ್ನು ನಿರ್ಮಿಸಿ

ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…

1 hour ago

ಕೊಳೆಗೇರಿ ಮಕ್ಕಳ ಬದುಕು ರೂಪಿಸುವ ‘ಖೇಲ್ ಘರ್’ ಎಂಬ ಆಟದ ಮನೆ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…

4 hours ago

ಮಡಿಕೇರಿ ಅರಮನೆಗೆ ಕೇಂದ್ರದಿಂದ ಸಂರಕ್ಷಿತ ಸ್ಮಾರಕ ಸ್ಥಾನಮಾನ

ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…

4 hours ago