ರಾಜ್ಯ

ಎಸ್‌ಸಿಎಸ್‌ಪಿ ಅನುದಾನ :ತ್ವರಿತ ಗುರಿ ಸಾಧನೆಗೆ ಮಹದೇವಪ್ಪ ಸೂಚನೆ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಶನಿವಾರ ವಿಧಾನಸೌಧದಲ್ಲಿ SCSP ನೋಡಲ್ ಅಧಿಕಾರಿಗಳ ಸಭೆ ನಡೆಸಿ, ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯ ಒಳಗಾಗಿ SCSP ಅನುದಾನವನ್ನು ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ flag ship ಯೋಜನೆಗಳನ್ನು ರೂಪಿಸಬೇಕೆಂದು ಸೂಚಿಸಿದರು.

ಸಹಕಾರಿ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟರ ನೊಂದಾವಣೆ ಮಾಡಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ SCSP ಹಣವನ್ನು ಪಡೆಯುವ ಇಲಾಖೆಗಳು ಸುಮ್ಮನೇ ಹಣ ಖರ್ಚು ಮಾಡದೇ ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ಮಾಡುವ ಮೂಲಕ ಪರಿಶಿಷ್ಟ ಸಮುದಾಯದ ಹಣ ಸದ್ಬಳಕೆಯತ್ತ ಗಮನ ಹರಿಸಬೇಕೆಂದು ತಿಳಿಸಿದರು.

ಅಧಿಕಾರಿಗಳು ಮೌಲ್ಯಮಾಪನದ ಕಡೆ ಹೆಚ್ಚು ಗಮನ ಹರಿಸಿ, ವಸತಿ ಇಲ್ಲದ ಜನರು ಎಷ್ಟು ಮಂದಿ ಇದ್ದಾರೆ, ಕೃಷಿಯಲ್ಲಿ ತೊಂದರೆ ಅನುಭವಿಸುತ್ತಿರುವ ಪರಿಶಿಷ್ಟ ಸಮುದಾಯದವರು ಎಷ್ಟು ಮಂದಿ ಇದ್ದಾರೆ ಮತ್ತು ಯಾರಿಗೆಲ್ಲಾ ನಾವು ಉದ್ಯಮಗಳನ್ನು ಮಾಡಲು, ಕೌಶಲ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂಬುದರ ಕುರಿತು ಅಧಿಕಾರಿ ಮಿತ್ರರು ನೇರವಾಗಿ ಜನರ ಬಳಿ ಹೋಗಿ ವಾಸ್ತವಗಳನ್ನು ಅರಿಬೇಕೆಂದು ತಿಳಿಸಿದರು.

ಇನ್ನು ಪರಿಶಿಷ್ಟ ಸಮುದಾಯದವರಿಗೆ ಮನೆ ಕಟ್ಟಲು 5 ಲಕ್ಷ ರೂಪಾಯಿಯ unit fund ಅನ್ನು ನಿಗದಿಗೊಳಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಉನ್ನತ ಶಿಕ್ಷಣ ಮಾಡುತ್ತಿರುವ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಅವರಿಗೆ ಬರಬೇಕಾದ ವಿದ್ಯಾರ್ಥಿ ವೇತನವನ್ನು ನಿಗದಿತ ಸಮಯಕ್ಕೆ ಕಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ಸಂದರ್ಭದಲ್ಲಿ ಕೆಲವೊಂದು ಗೊಂದಲ ಉಂಟಾಗಿದ್ದು, ಈ ಗೊಂದಲವನ್ನು ಶೀಘ್ರದಲ್ಲಿ ಪರಿಹಾರ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು.

ಇನ್ನು ಸರ್ಕಾರದ ಎಲ್ಲಾ ಇಲಾಖೆಗಳೂ ಕೂಡಾ ಪರಿಶಿಷ್ಟರ ಹಣವನ್ನು ಸಾಮಾಜಿಕ ಖರ್ಚು ( Social Expenditure) ಎಂದು ಭಾವಿಸದೇ ಅದನ್ನು ಸಾಮಾಜಿಕ ಹೂಡಿಕೆ ( Social Investment ) ಆಗಿ ವಿನಿಯೋಗಿಸಿದರೆ ಮಾತ್ರ ಪರಿಶಿಷ್ಟರ ಏಳಿಗೆ ಸಾಧ್ಯ ಎಂಬುದಾಗಿ ತಿಳಿದರು.

ನಿಗದಿತ ಅವಧಿಯಲ್ಲಿ ಹಣ ಖರ್ಚು ಮಾಡದೇ SCSP/TSP ಕಾಯ್ದೆಯ ಆಶಯಗಳನ್ನು ಮರೆತು, ನಿಯಮಬಾಹಿರವಾಗಿ ವರ್ತಿಸಿದರೆ ಮತ್ತು ಅನುದಾವನ್ನು ಬಳಸುವಲ್ಲಿ ನಿರ್ಲಕ್ಷ್ಯ ತೋರಿದರೆ ಸಮಾಜ ಕಲ್ಯಾಣ ಇಲಾಖೆಯು ಸಿಂಗಲ್ ವಿಂಡೋ ಏಜೆನ್ಸಿ ಮೂಲಕ ಖರ್ಚಾಗದ ಹಣವನ್ನು ಹಿಂಪಡೆದು, ಪರಿಶಿಷ್ಟ ಸಮುದಾಯಗಳಿಗೆ ಪೂರಕ ಯೋಜನೆಗಳನ್ನು ನೀಡಲಿದೆ ಎಂಬ ಸಂಗತಿಯನ್ನು ಪ್ರಮುಖವಾಗಿ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

7 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

7 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

7 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

7 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

8 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

16 hours ago