ರಾಜ್ಯ

SCSP/TSP ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ : ಸಂಪುಟ ಸಭೆಯಲ್ಲಿ ಎಚ್‌ಸಿಎಂ ಗರಂ

ಬೆಂಗಳೂರು : ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ರೋಷಾವೇಶ ಪ್ರದರ್ಶಿಸಿದ್ದಾರೆ. ಎಸ್‌ಸಿಎಸ್‌ಪಿ, ಟಿಎಸ್‌ಪಿಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ? ಏನು ಅಂದುಕೊಂಡಿದ್ದೀರಿ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿಯೇ ಸಚಿವರು ಪ್ರಶ್ನಿಸಿದ್ದು, ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆದ ಪ್ರಸಂಗ ನಡೆದಿದೆ.

ಸಚಿವ ಸಂಪುಟ ಸಭೆ ವೇಳೆ ನೇರವಾಗಿ ಸಿಎಂಗೆ ಹೇಳದೆ ಸಂಪುಟ ಸಹೋದ್ಯೋಗಿಗಳ ಮೇಲೆ ಮಹದೇವಪ್ಪ ಅಸಮಾಧಾನ ಹೊರಹಾಕಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದ ಬಗ್ಗೆ ಚರ್ಚೆ ವೇಳೆ ಗಂಗಾಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಸಚಿವ ಕೆ.ಜೆ.ಜಾರ್ಜ್ ಮತ್ತು ಎಚ್.ಸಿ.ಮಹದೇವಪ್ಪ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ನಾನು ಎದ್ದು ಹೊರಟೇ ಬಿಡುತ್ತೇನೆಂದು ಸಚಿವ ಮಹದೇವಪ್ಪ ಕೂಗಾಡಿದ್ದಾರೆ.

ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಈ ಹಿಂದಿನಿಂದಲೂ ವಿಪಕ್ಷಗಳು ಮಾಡುತ್ತಲೇ ಬಂದಿದ್ದವು. ಈ ವಿಚಾರ ವಿಧಾನ ಪರಿಷತ್‌ನಲ್ಲೂ ಭಾರಿ ಚರ್ಚೆಗೆ ಕಾರಣವಾಗಿತ್ತು. ಹಣವನ್ನು ಬೆರೆ ಯೋಜನೆಗಳಿಗೆ ಬಳಸಿದ ಪರಿಣಾಮ ದಲಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಆಡ್ಡಿಯಾಗಿದೆ ಎಂದು ಸದಸ್ಯರಾದ ಹೇಮಲತಾ ನಾಯಕ್ ಹಾಗೂ ಶರವಣ ಆರೋಪಿಸಿದ್ದರು.

ಇದನ್ನೂ ಓದಿ:-ಕರ್ನೂಲ್‌ ಪ್ರಕರಣ ಬಳಿಕ ಎಚ್ಚೆತ್ತಾ ಸಾರಿಗೆ ಇಲಾಖೆ : ನಿಯಮ ಬಾಹಿರವಾಗಿ ಜನರನ್ನು ಸಾಗಿಸುತ್ತಿದ್ದ 6 ಬಸ್‌ ಜಪ್ತಿ

ಆದರೆ, ಆರೋಪ ನಿರಾಕರಿಸಿದ್ದ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಗ್ಯಾರಂಟಿ ಯೋಜನೆಗಳಿಗೆ ಈ ಹಣವನ್ನು ಬಳಸಿಲ್ಲ. ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲು ಆಗುವುದಿಲ್ಲ. ಮೀಸಲಿಟ್ಟ ಹಣವನ್ನು ಆ ಸಮುದಾಯದ ಜನರಿಗೆ ಮಾತ್ರ ಬಳಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರು.

ಅಂದು ಬೇರೆ ಯೋಜನೆಗಳಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ಬಳಕೆಯಾಗಿಲ್ಲ ಎಂದು ಸದನದಲ್ಲಿ ಉತ್ತರಿಸಿದ್ದ ಸಚಿವರೇ ಇಂದು ಆ ಹಣದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಗರಂ ಆಗಿದ್ದಾರೆ. ಏನು ಅಂದುಕೊಂಡಿದ್ದೀರಿ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿರೋದು ಭಾರೀ ಕುತೂಹಲ ಮೂಡಿಸಿದೆ. ಜೊತೆಗೆ ವಿಪಕ್ಷಗಳ ಆರೋಪಕ್ಕೆ ಮತ್ತಷ್ಟು ಇಂಬು ನೀಡಿದೆ.

ಆಂದೋಲನ ಡೆಸ್ಕ್

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

32 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 hours ago