ರಾಜ್ಯ

ಫಲ್ಗುಣಿ ನದಿಯಲ್ಲಿ ಶೋಧ: ಇನ್ನೂ ಸಿಗದ ಮುಮ್ತಾಜ್‌ ಅಲಿ ಸುಳಿವು

ಮಂಗಳೂರು: ಮುಸ್ಲಿಂ ಮುಖಂಡ, ಮಂಗಳೂರು ಉತ್ತರ ಭಾಗದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ಭಾನುವಾರ ಮುಂಜಾನೆ ನಾಪತ್ತೆಯಾಗಿದ್ದಾರೆ. ಅವರ ಬಿಎಂಡ್ಲ್ಯೂ ಕಾರು ಕೂಳೂರು ಸೇತುವೆಯಲ್ಲಿ ಪತ್ತೆಯಾಗಿದೆ. ಅವರಿಗಾಗಿ ಬೆಳಿಗ್ಗೆ 7 ಗಂಟೆಯಿಂದ ಕೂಳೂರು ಬಳಿ ಫಲ್ಗುಣಿ ನದಿಯಲ್ಲಿ ಶೋಧ ನಡೆಯುತ್ತಿದ್ದು, ಇನ್ನೂ ಅವರ ಸುಳಿವು ಸಿಕ್ಕಿಲ್ಲ.

ಅಗ್ನಿಶಾಮಕ ಮತ್ತು ತುರ್ತು ಸೇವಾ ತಂಡದವರು ಹಾಗೂ ಪೊಲೀಸ್ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಆರೇಳು ದೋಣಿಗಳು ಕೂಳೂರು ಸೇತುವೆಯ ತಳಭಾಗದಲ್ಲಿ ಫಾಲ್ಗುಣಿ ನದಿಯಲ್ಲಿ ಮುಮ್ತಾಜ್‌ ಅಲಿ ಅವರಿಗಾಗಿ ಶೋಧ ನಡೆಯುತ್ತಿದೆ. ಸತತ 7 ಗಂಟೆಯಿಂದ ಶೋಧ ನಡೆಸಿದರು ಅವರ ಬಗ್ಗೆ ಯಾವುದೇ ಕುರುಹು ಸಿಕ್ಕಿಲ್ಲ. ಮುಳುಗು ತಜ್ಞ ಈಶ್ವರ್‌ ಮಲ್ಪೆ ಅವರು ನದಿಯಲ್ಲಿ ಹುಡುಕಿದರೂ ಮುಮ್ತಾಜ್‌ ಅಲಿ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.

ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದಾರೆ. ನದಿಯಲ್ಲಿ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್, ಅಗ್ನಿಶಾಮಕದಳದಿಂದ ಹುಡುಕಾಟ ನಡೆಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಸ್ಥಳದಲ್ಲಿದ್ದು ಶೋಧಕಾರ್ಯಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ.

ನೀವು ಚೆನ್ನಾಗಿರಿ, ನಾನಿನ್ನು ಬದುಕಿರುವುದಿಲ್ಲ
ಮುಮ್ತಾಕ್‌ ಅವರು ಮುಂಜಾನೆ 3ಗಂಟೆ ಸುಮಾರಿಗೆ ಮನೆಯಿಂದ ಹೊರಟಿದ್ದಾರೆ. ಅದೇ ಸಮಯದಕ್ಕೆ ಕುಟುಂಬದ ವಾಟ್ಸ್‌ ಆಪ್‌ ಬಳಗಕ್ಕೆ ಧ್ವನಿ ಮುದ್ರಿತ ಸಂದೇಶ ಕಳುಹಿಸಿ, ನೀವು, ಚೆನ್ನಾಗಿರಿ ನಾನು ಸಾಯುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಬಳಿಕ 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಮೇಲೆ ಮುಮ್ತಾಜ್ ಬಿಎಂಡಬ್ಲ್ಯು ಕಾರು ದೊರೆತಿದೆ. ಅವರ ಪುತ್ರಿಗೆ ಈ ವಿಚಾರ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ನಾಪತ್ತೆಯಾಗಿರುವ ಮಮ್ತಾಜ್ ಆಲಿ ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ ಕಮಿಷನರ್ ಎದುರು ಮೊಯಿದ್ದೀನ್ ಬಾವ ಕಣ್ಣೀರು ಹಾಕಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ಮುಂಜಾನೆ ಮೂರು ಗಂಟೆಗೆ ಮನೆಯಲ್ಲಿ ಕೆಲ ಕಾರಣಗಳಿಂದ ಬಿಎಂಡಬ್ಲೂ ಕಾರ್ ಚಲಾಯಿಸಿ ಬಂದಿದ್ದರು. ಕುಳೂರು ಸೇತುವೆ ಯಲ್ಲಿ ಕಾರು ಅಪಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ, ಎಫ್ ಎಸ್ ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದಿಂದ ಕೆಲ ಮಾಹಿತಿಗಳು ಬಂದಿದೆ, ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

21 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

1 hour ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago