Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಸಿದ್ದರಾಮಯ್ಯ ಟಿಪ್ಪುವಿನ ಎರಡನೇ ಅವತಾರ : ಯತ್ನಾಳ್‌

ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ ಕನ್ನಡ ಭಾಷೆ ತೆಗೆದುಹಾಕಿ ಪರ್ಷಿಯನ್ ಕಲಿಕೆಯನ್ನು ಕಡ್ಡಾಯ ಮಾಡಿದ ಹಾಗೆ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉರ್ದುವನ್ನು ಪ್ರಥಮ ಭಾಷೆಯನ್ನಾಗಿ ಮಾಡಿಬಿಡುತ್ತಾರೆ ಎಂದು ಕಿಡಿಕಾರಿದರು.

ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಯತ್ನಾಳ್ ಆರೋಪಿಸಿದರು. ಬಿಜೆಪಿಯವರು ರಾಮ ಮಂದಿರ ನಿರ್ಮಾಣ ಮಾಡಿದರೆ ಕ್ಯಾತೆ ತೆಗೆಯುವ ಕಾಂಗ್ರೆಸ್ ನಾಯಕರು ತಾವೇನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!