ರಾಜ್ಯ

ಸಿದ್ದರಾಮಯ್ಯ ಟಿಪ್ಪುವಿನ ಎರಡನೇ ಅವತಾರ : ಯತ್ನಾಳ್‌

ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ ಕನ್ನಡ ಭಾಷೆ ತೆಗೆದುಹಾಕಿ ಪರ್ಷಿಯನ್ ಕಲಿಕೆಯನ್ನು ಕಡ್ಡಾಯ ಮಾಡಿದ ಹಾಗೆ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉರ್ದುವನ್ನು ಪ್ರಥಮ ಭಾಷೆಯನ್ನಾಗಿ ಮಾಡಿಬಿಡುತ್ತಾರೆ ಎಂದು ಕಿಡಿಕಾರಿದರು.

ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಯತ್ನಾಳ್ ಆರೋಪಿಸಿದರು. ಬಿಜೆಪಿಯವರು ರಾಮ ಮಂದಿರ ನಿರ್ಮಾಣ ಮಾಡಿದರೆ ಕ್ಯಾತೆ ತೆಗೆಯುವ ಕಾಂಗ್ರೆಸ್ ನಾಯಕರು ತಾವೇನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.

andolanait

Recent Posts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

1 hour ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

1 hour ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

2 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

3 hours ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

3 hours ago