ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಪ್ರಾರಂಭ: ಮೊದಲ ಬಾರಿಗೆ ವೆಬ್‌ ಕ್ಯಾಸ್ಟಿಂಗ್‌ ಅಳವಡಿಕೆ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ದ್ವೀತಿಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಮೊದಲ ಬಾರಿಗೆ ಪರೀಕ್ಷೆಯೂ ವೆಬ್‌ ಕ್ಯಾಸ್ಟಿಂಗ್‌ ಕಣ್ಗಾವಲಿನಲ್ಲಿ ನಡೆಯಲಿದೆ.

ಮಾರ್ಚ್‌.1 ರಿಂದ ಮಾರ್ಚ್‌.20 ರವರೆಗೆ ನಡೆಯುವ ಪರೀಕ್ಷೆಗೆ ಶಿಕ್ಷಣ ಇಲಾಖೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇದೇ ಮೊದಲ ಬಾರಿಗೆ ವೆಬ್‌ ಕ್ಯಾಸ್ಟಿಂಗ್‌ ಕಣ್ಗಾವಲು ವ್ಯವಸ್ಥೆ ಮಾಡಿದೆ. ಈ ವ್ಯವಸ್ಥೆಯನ್ನು ಕಳೆದ ವರ್ಷ ಜಾರಿ ಮಾಡಲಾಗಿದ್ದು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೂ ವ್ಯವಸ್ಥೆ ಮಾಡುವ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ. ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಪರೀಕ್ಷಾ ಸಿದ್ಧತೆ ಏನು?

ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅವರಲ್ಲಿ 3,35,468 ವಿದ್ಯಾರ್ಥಿಗಳು ಮತ್ತು 3,35,389 ವಿದ್ಯಾರ್ಥಿನಿಯರು ಇದ್ದರೆ, ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ದ್ವಿತೀಯ ಪಿಯುಸಿ ಪರೀಕ್ಷೆಯ ನಿಯಮಗಳೇನು?

1. ಪರೀಕ್ಷಾ ದಿನಗಳಂದೂ ಪರೀಕ್ಷಾ ಕೇಂದ್ರದಿಂದ 200 ಮೀಟರ್‌ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
2. ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಮತ್ತು ವೆಬ್‌ ಕ್ಯಾಸ್ಟಿಂಗ್‌ ವ್ಯವಸ್ಥೆ ಇರಲಿದೆ.
3. ಪರೀಕ್ಷಾ ಕೇಂದ್ರದ ಸುತ್ತ-ಮುತ್ತ ಜೆರಾಕ್ಸ್‌, ಸೈಬರ್‌ ಸೆಂಬರ್‌ ಹಾಗೂ ಕಂಪ್ಯೂಟರ್‌ ಸೆಂಟರ್‌ಗಳನ್ನು ಮುಚ್ಚಲಾಗುತ್ತದೆ.
4. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್‌ ಭದ್ರತೆಯನ್ನು ಅಳವಡಿಸಲಾಗಿದೆ.
5. ಪ್ರಶ್ನೆ ಪತ್ರಿಕೆ ಲೀಕ್‌ ಮಾಡುವ ಮತ್ತು ಅಕ್ರಮ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕ್ರಮ ವಹಿಸಲಾಗಿದೆ.
6. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಸ್ಮಾರ್ಟ್ ವಾಚ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧಿಸಲಾಗಿದೆ.
7. ಪ್ರಶ್ನೆ ಪತ್ರಿಕೆ ರವಾನೆ ಮಾಡೋದರಿಂದ ಹಿಡಿದು ಪರೀಕ್ಷಾ ಕೇಂದ್ರಕ್ಕೆ ತಲುಪವರೆಗೂ ಕ್ಯಾಮೆರಾ ರೆಕಾರ್ಡ್‌ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

6 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

6 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

7 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

7 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

7 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

7 hours ago