ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನಗಳಿಸಿದೆ.
ಪ್ರಾಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದರು.
ಫಲಿತಾಂಶದ ಪ್ರಕಾರ ಒಟ್ಟಾರೆ ಹಾಜರಾದವರ ಪೈಕಿ ಶೇ 73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶೇ 77.88 ರಷ್ಟು ಬಾಲಕಿಯರು ತೇರ್ಗಡೆಯಾದರೆ, ಶೇ 68.22 ರಷ್ಟು ಬಾಲಕರು ಪಾಸಾಗಿದ್ದಾರೆ.
ಫಲಿತಾಂಶದ ಪ್ರಕಾರ ಉಡುಪಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ (ಶೇ.93.90) ಗಳಿಸಿದರೆ, ಯಾದಗಿರಿ (ಶೇ 48.45) ಕೊನೆಯ ಸ್ಥಾನ ಪಡೆದಿದೆ.
ಕೊಡಗು ಜಿಲ್ಲೆ ನಾಲ್ಕನೇ ಸ್ಥಾನ (ಶೇ 83.84) ಪಡೆದರೆ, ಮೈಸೂರು 12ನೇ ಸ್ಥಾನ (ಶೇ 74.30), ಚಾಮರಾಜನಗರ 13ನೇ ಸ್ಥಾನ (ಶೇ 73.97) ಹಾಗೂ ಮಂಡ್ಯ 14ನೇ ಸ್ಥಾನ (ಶೇ 73.27) ಪಡೆದುಕೊಂಡಿದೆ.
ಇನ್ನು ವೈಯುಕ್ತಿಕ ಅಂಕಗಳಿಕೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಮಂಗಳೂರು ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿ ಅಮೂಲ್ಯ ಕಾಮತ್ (597/600) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ (597) ಮೊದಲ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ (599) ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ.
ಮಧ್ಯಾಹ್ನ 1.30ರ ನಂತರ ವಿದ್ಯಾರ್ಥಿಗಳು https://karresults.nic.in/ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ಮಾರ್ಚ್ 1 ರಿಂಧ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…
ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…