ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನಗಳಿಸಿದೆ.
ಪ್ರಾಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದರು.
ಫಲಿತಾಂಶದ ಪ್ರಕಾರ ಒಟ್ಟಾರೆ ಹಾಜರಾದವರ ಪೈಕಿ ಶೇ 73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶೇ 77.88 ರಷ್ಟು ಬಾಲಕಿಯರು ತೇರ್ಗಡೆಯಾದರೆ, ಶೇ 68.22 ರಷ್ಟು ಬಾಲಕರು ಪಾಸಾಗಿದ್ದಾರೆ.
ಫಲಿತಾಂಶದ ಪ್ರಕಾರ ಉಡುಪಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ (ಶೇ.93.90) ಗಳಿಸಿದರೆ, ಯಾದಗಿರಿ (ಶೇ 48.45) ಕೊನೆಯ ಸ್ಥಾನ ಪಡೆದಿದೆ.
ಕೊಡಗು ಜಿಲ್ಲೆ ನಾಲ್ಕನೇ ಸ್ಥಾನ (ಶೇ 83.84) ಪಡೆದರೆ, ಮೈಸೂರು 12ನೇ ಸ್ಥಾನ (ಶೇ 74.30), ಚಾಮರಾಜನಗರ 13ನೇ ಸ್ಥಾನ (ಶೇ 73.97) ಹಾಗೂ ಮಂಡ್ಯ 14ನೇ ಸ್ಥಾನ (ಶೇ 73.27) ಪಡೆದುಕೊಂಡಿದೆ.
ಇನ್ನು ವೈಯುಕ್ತಿಕ ಅಂಕಗಳಿಕೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಮಂಗಳೂರು ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿ ಅಮೂಲ್ಯ ಕಾಮತ್ (597/600) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ (597) ಮೊದಲ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ (599) ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ.
ಮಧ್ಯಾಹ್ನ 1.30ರ ನಂತರ ವಿದ್ಯಾರ್ಥಿಗಳು https://karresults.nic.in/ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ಮಾರ್ಚ್ 1 ರಿಂಧ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…