ಬೆಂಗಳೂರು: ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ.
ಇನ್ನು ಪರೀಕ್ಷೆಯಲ್ಲಿ ಅನುತ್ತೀರ್ಣಾರದ ವಿದ್ಯಾರ್ಥಿಗಳು ನಿರಾಶೆ, ಆತಂಕಕ್ಕೆ ಓಳಗಾಗಿ ದುಡುಕಿನ ನಿರ್ಧಾರ ಕೈಗುಳ್ಳುವುದು ಬೇಡ. ಬದುಕು ತುಂಬಾ ವಿಶಾಲವಾದದ್ದು, ಮತ್ತೇ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಅವಕಾಶ ಖಂಡಿತಾ ಸಿಗಲಿದೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದು ಕಿವಿಮಾತು ಹೇಳಿದ್ದಾರೆ.
ವಿವಿಧ ಭಾಗಗಳಲ್ಲಿ ರ್ಯಾಂಕ್ ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ. ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣು ಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೂ ಸ್ಪೂರ್ತಿಯಾಗಲಿ ಎಂದು ಶುಭಾ ಹಾರೈಸಿದ್ದಾರೆ.





