ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಶೀಘ್ರದಲ್ಲೇ ಕೇಂದ್ರ ಸರ್ಕಾರದ ಅಧಿಕೃತ ಅಪ್ಲಿಕೇಶನ್ ‘ಡಿಜಿಲಾಕರ್’ ನಲ್ಲಿ ಲಭ್ಯವಾಗಲಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರುವ ಡಿಜಿಲಾಕರ್, ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ 12ನೇ ತರಗತಿಯ ಫಲಿತಾಂಶ 2026 ಶೀಘ್ರದಲ್ಲೇ ಡಿಜಿಲಾಕರ್ನಲ್ಲಿ ಲಭ್ಯವಾಗಲಿದೆ. ಯಾವುದೇ ಸಾಲುಗಟ್ಟಿ ನಿಲ್ಲುವ ಅಗತ್ಯವಿಲ್ಲ, ಯಾವುದೇ ಕಾಗದಪತ್ರಗಳ ಜಂಜಾಟವಿಲ್ಲ. ನಿಮ್ಮ ಫಲಿತಾಂಶಗಳನ್ನು ಅತ್ಯಂತ ಸುರಕ್ಷಿತವಾಗಿ ಪಡೆದುಕೊಳ್ಳಿ. ಶೀಘ್ರವೇ ನಿಮ್ಮ ಅಂಕಗಳನ್ನು ಪರಿಶೀಲಿಸಲು ಸಿದ್ಧರಾಗಿರಿ’ ಎಂದು ತಿಳಿಸಿದೆ.
ಫಲಿತಾಂಶ ಪ್ರಕಟವಾದ ತಕ್ಷಣ ಅಧಿಕೃತ ವೆಬ್ಸೈಟ್ಗಳಲ್ಲಿ ಸರ್ವರ್ ಸಮಸ್ಯೆ ಉಂಟಾಗಿ ವಿದ್ಯಾರ್ಥಿಗಳು ಪರದಾಡುವುದು ಸಾಮಾನ್ಯ. ಆದರೆ ಡಿಜಿಲಾಕರ್ ಮೂಲಕ ವಿದ್ಯಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ, ಸುಲಭವಾಗಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಅದರ ಡಿಜಿಟಲ್ ಪ್ರತಿಯನ್ನು ತಕ್ಷಣವೇ ಡೌನ್ಲೋಡ್ ಮಾಡಿಕೊಳ್ಳಬಹುದು.
ಇಲ್ಲಿ ಲಭ್ಯವಾಗುವ ಡಿಜಿಟಲ್ ಅಂಕಪಟ್ಟಿಗಳು ಭೌತಿಕ ಅಂಕಪಟ್ಟಿಗಳಿಗೆ ಸಮನಾದ ಅಧಿಕೃತ ಮಾನ್ಯತೆಯನ್ನು ಹೊಂದಿರುತ್ತವೆ. ಮುಂದಿನ ವ್ಯಾಸಂಗಕ್ಕೆ ಪ್ರವೇಶಾತಿ ಪಡೆಯಲು ಅಥವಾ ಇತರ ಯಾವುದೇ ಅಧಿಕೃತ ಕೆಲಸಗಳಿಗೆ ಈ ಡಿಜಿಟಲ್ ಅಂಕಪಟ್ಟಿಯನ್ನು ನೇರವಾಗಿ ಬಳಸಿಕೊಳ್ಳಬಹುದು. ಶಾಲೆಯಿಂದ ಅಥವಾ ಕಾಲೇಜಿನಿಂದ ಮೂಲ ಅಂಕಪಟ್ಟಿ ಕೈ ಸೇರುವವರೆಗೂ ಕಾಯುವ ಅಗತ್ಯ ಇರುವುದಿಲ್ಲ.
ಡಿಜಿಲಾಕರ್ನಲ್ಲಿ ಚೆಕ್ ಮಾಡುವುದು ಹೇಗೆ?
ಮೊದಲಿಗೆ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಗೂಗಲ್ ಪ್ಲೇ-ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ನಿಂದ ಅಧಿಕೃತ ಡಿಜಿಲಾಕರ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ (ಅಥವಾ ಕಂಪ್ಯೂಟರ್ನಲ್ಲಿ digilocker.gov.in ವೆಬ್ಸೈಟ್ಗೆ ಭೇಟಿ ನೀಡಿ). ಆ್ಯಪ್ ತೆರೆದ ನಂತರ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಬಳಸಿ ‘Sign Up’ ಮಾಡಿ. (ಈಗಾಗಲೇ ಖಾತೆ ಇದ್ದರೆ ‘Login’ ಆಗಿ). ಲಾಗಿನ್ ಆದ ಬಳಿಕ, ‘Search’ ಆಯ್ಕೆಗೆ ಹೋಗಿ ‘Karnataka School Examination and Assessment Board’ ಅಥವಾ ‘KSEAB’ ಎಂದು ಮೊದಲು ಟೈಪ್ ಮಾಡಿ. ಅಲ್ಲಿ ಕಾಣುವ ‘Class 12 Passing Certificate’ ಅಥವಾ ‘Marksheet’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ದ್ವಿತೀಯ ಪಿಯುಸಿ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪರೀಕ್ಷೆಯ ವರ್ಷವನ್ನು (2026) ಸರಿಯಾಗಿ ನಮೂದಿಸಿ ‘Get Document’ ಬಟನ್ ಒತ್ತಿ. ತಕ್ಷಣವೇ ನಿಮ್ಮ ದ್ವಿತೀಯ ಪಿಯುಸಿ ಅಂಕಪಟ್ಟಿ ಪರದೆಯ ಮೇಲೆ ಮೂಡುತ್ತದೆ. ಮುಂದಿನ ರೆಫರೆನ್ಸ್ಗಾಗಿ ಇದನ್ನು ಡೌನ್ಲೋಡ್ ಮಾಡಿ ಸೇವ್ ಮಾಡಿಕೊಳ್ಳಬಹುದು.
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…