ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಶೀಘ್ರದಲ್ಲೇ ಕೇಂದ್ರ ಸರ್ಕಾರದ ಅಧಿಕೃತ ಅಪ್ಲಿಕೇಶನ್ ‘ಡಿಜಿಲಾಕರ್’ ನಲ್ಲಿ ಲಭ್ಯವಾಗಲಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರುವ ಡಿಜಿಲಾಕರ್, ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ 12ನೇ ತರಗತಿಯ ಫಲಿತಾಂಶ 2026 ಶೀಘ್ರದಲ್ಲೇ ಡಿಜಿಲಾಕರ್ನಲ್ಲಿ ಲಭ್ಯವಾಗಲಿದೆ. ಯಾವುದೇ ಸಾಲುಗಟ್ಟಿ ನಿಲ್ಲುವ ಅಗತ್ಯವಿಲ್ಲ, ಯಾವುದೇ ಕಾಗದಪತ್ರಗಳ ಜಂಜಾಟವಿಲ್ಲ. ನಿಮ್ಮ ಫಲಿತಾಂಶಗಳನ್ನು ಅತ್ಯಂತ ಸುರಕ್ಷಿತವಾಗಿ ಪಡೆದುಕೊಳ್ಳಿ. ಶೀಘ್ರವೇ ನಿಮ್ಮ ಅಂಕಗಳನ್ನು ಪರಿಶೀಲಿಸಲು ಸಿದ್ಧರಾಗಿರಿ’ ಎಂದು ತಿಳಿಸಿದೆ.
ಫಲಿತಾಂಶ ಪ್ರಕಟವಾದ ತಕ್ಷಣ ಅಧಿಕೃತ ವೆಬ್ಸೈಟ್ಗಳಲ್ಲಿ ಸರ್ವರ್ ಸಮಸ್ಯೆ ಉಂಟಾಗಿ ವಿದ್ಯಾರ್ಥಿಗಳು ಪರದಾಡುವುದು ಸಾಮಾನ್ಯ. ಆದರೆ ಡಿಜಿಲಾಕರ್ ಮೂಲಕ ವಿದ್ಯಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ, ಸುಲಭವಾಗಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಅದರ ಡಿಜಿಟಲ್ ಪ್ರತಿಯನ್ನು ತಕ್ಷಣವೇ ಡೌನ್ಲೋಡ್ ಮಾಡಿಕೊಳ್ಳಬಹುದು.
ಇಲ್ಲಿ ಲಭ್ಯವಾಗುವ ಡಿಜಿಟಲ್ ಅಂಕಪಟ್ಟಿಗಳು ಭೌತಿಕ ಅಂಕಪಟ್ಟಿಗಳಿಗೆ ಸಮನಾದ ಅಧಿಕೃತ ಮಾನ್ಯತೆಯನ್ನು ಹೊಂದಿರುತ್ತವೆ. ಮುಂದಿನ ವ್ಯಾಸಂಗಕ್ಕೆ ಪ್ರವೇಶಾತಿ ಪಡೆಯಲು ಅಥವಾ ಇತರ ಯಾವುದೇ ಅಧಿಕೃತ ಕೆಲಸಗಳಿಗೆ ಈ ಡಿಜಿಟಲ್ ಅಂಕಪಟ್ಟಿಯನ್ನು ನೇರವಾಗಿ ಬಳಸಿಕೊಳ್ಳಬಹುದು. ಶಾಲೆಯಿಂದ ಅಥವಾ ಕಾಲೇಜಿನಿಂದ ಮೂಲ ಅಂಕಪಟ್ಟಿ ಕೈ ಸೇರುವವರೆಗೂ ಕಾಯುವ ಅಗತ್ಯ ಇರುವುದಿಲ್ಲ.
ಡಿಜಿಲಾಕರ್ನಲ್ಲಿ ಚೆಕ್ ಮಾಡುವುದು ಹೇಗೆ?
ಮೊದಲಿಗೆ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಗೂಗಲ್ ಪ್ಲೇ-ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ನಿಂದ ಅಧಿಕೃತ ಡಿಜಿಲಾಕರ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ (ಅಥವಾ ಕಂಪ್ಯೂಟರ್ನಲ್ಲಿ digilocker.gov.in ವೆಬ್ಸೈಟ್ಗೆ ಭೇಟಿ ನೀಡಿ). ಆ್ಯಪ್ ತೆರೆದ ನಂತರ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಬಳಸಿ ‘Sign Up’ ಮಾಡಿ. (ಈಗಾಗಲೇ ಖಾತೆ ಇದ್ದರೆ ‘Login’ ಆಗಿ). ಲಾಗಿನ್ ಆದ ಬಳಿಕ, ‘Search’ ಆಯ್ಕೆಗೆ ಹೋಗಿ ‘Karnataka School Examination and Assessment Board’ ಅಥವಾ ‘KSEAB’ ಎಂದು ಮೊದಲು ಟೈಪ್ ಮಾಡಿ. ಅಲ್ಲಿ ಕಾಣುವ ‘Class 12 Passing Certificate’ ಅಥವಾ ‘Marksheet’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ದ್ವಿತೀಯ ಪಿಯುಸಿ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪರೀಕ್ಷೆಯ ವರ್ಷವನ್ನು (2026) ಸರಿಯಾಗಿ ನಮೂದಿಸಿ ‘Get Document’ ಬಟನ್ ಒತ್ತಿ. ತಕ್ಷಣವೇ ನಿಮ್ಮ ದ್ವಿತೀಯ ಪಿಯುಸಿ ಅಂಕಪಟ್ಟಿ ಪರದೆಯ ಮೇಲೆ ಮೂಡುತ್ತದೆ. ಮುಂದಿನ ರೆಫರೆನ್ಸ್ಗಾಗಿ ಇದನ್ನು ಡೌನ್ಲೋಡ್ ಮಾಡಿ ಸೇವ್ ಮಾಡಿಕೊಳ್ಳಬಹುದು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…