ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ ಆತಂಕ ಸೃಷ್ಟಿಸಿದ್ದ ಇಬ್ಬರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾಗಳ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿದ್ದ ಉಪವಿತರಕ ಸಂಸ್ಥೆಯ ಸಿಬ್ಬಂದಿಗಳಾದ ಇ.ಮಂಜುನಾಥ್ ಹಾಗೂ ಅಬ್ದುಲ್ ಕಲಾಂ ಬಂಧಿತರು. ಆರೋಪಿಗಳನು ವಿಚಾರಣೆಗೊಳಪಡಿಸಿದಾಗ ಕೃತ್ಯದ ಹಿಂದೆ ತೀರಾ ವೈಯಕ್ತಿಕ ಹಾಗೂ ವಿಚಿತ್ರ ಕಾರಣವಿರುವುದು ಬಹಿರಂಗವಾಗಿದೆ.

ಏ.24ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ದಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆಯ ಮೇಲ್ವಿಚಾರಣೆಗಾಗಿ ಅಳವಡಿಸಲಾಗಿದ್ದ 240 ಸಿಸಿಟಿವಿ ಕ್ಯಾಮೆರಾಗಳ ಫೀಡ್ ಏಕಾಏಕಿ ಆಫ್ ಆಗಿತ್ತು. ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿಯಿರುವಾಗ ಇದ್ದಕ್ಕಿದ್ದಂತೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಲೋಪವಾಗಿರುವುದು ಪೊಲೀಸರ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಪರಿಶೀಲನೆ ನಡೆಸಿದಾಗ ಇದು ತಾಂತ್ರಿಕ ದೋಷವಲ್ಲ, ಬದಲಾಗಿ ವ್ಯವಸ್ಥಿತವಾಗಿ ನಡೆದ ದುಷ್ಕೃತ್ಯ ಎಂಬುದು ಬಯಲಾಗಿತ್ತು.

ಸಂಸ್ಥೆಯ ಮೇಲಿನ ಸಿಟ್ಟಿಗೆ ಕೃತ್ಯ
ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಿದಾಗ ತಮ್ಮ ಸಂಸ್ಥೆಯ ಮೇಲಿನ ಸಿಟ್ಟಿಗೆ ಈ ರೀತಿ ಕೃತ್ಯ ಎಸಗಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳ ನಿರ್ವಹಣೆಯಯನ್ನ ಐವಿಎಸ್ ಡಿಜಿಟಲ್ ಸಲ್ಯೂಷನ್ಸ್ ಎಂಬ ಉಪವಿತರಕ ಸಂಸ್ಥೆಗೆ ನೀಡಲಾಗಿತ್ತು. ಕಂಪೆನಿಯಿಂದ ಬರಬೇಕಿದ್ದ ವೇತನ ಬಾಕಿಯಿದ್ದುದರಿಂದ ಕೋಪದಿಂದ ಕೃತ್ಯ ಎಸಗಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಪಂದ್ಯದ ದಿನ ತಮ್ಮ ಬಳಿಯಿದ್ದ ನಿಷ್ಕ್ರಿಯಗೊಂಡ ಹಳೆಯ ಐಡಿ ಕಾರ್ಡ್‌ಗಳನ್ನು ಬಳಸಿ ಕ್ರೀಡಾಂಗಣದೊಳಗೆ ಪ್ರವೇಶಿಸಿದ್ದಾರೆ. ನಂತರ ನೇರವಾಗಿ ಸಿಸಿಟಿವಿ ಸರ್ವರ್ ರೂಂಗೆ ತೆರಳಿ ಅಲ್ಲಿನ ಎನ್‌ವಿಆರ್ (ನೆಟ್ ವಿಡಿಯೋ ರೆಕಾರ್ಡರ್) ಮತ್ತು ಫೈಬರ್ ಕನೆಕ್ಷನ್‌ಗಳನ್ನು ಕಡಿತಗೊಳಿಸಿದ್ದರು. ಇದರಿಂದ ಪ್ರವೇಶ ದ್ವಾರಗಳ ಕ್ಯಾಮೆರಾಗಳು, ಕ್ರೀಡಾಂಗಣದ ಸುತ್ತಮುತ್ತಲಿನ ಕ್ಯಾಮೆರಾಗಳು, ಡಿ ಕಾರ್ಪೊರೇಟ್ ಸ್ಟ್ಯಾಂಡ್ ಮತ್ತಿತರ ಭಾಗಗಳ ದೃಶ್ಯಾವಳಿಗಳ ಫೀಡ್ ಸ್ಥಗಿತವಾಗಿತ್ತು. ಸಿಸಿಟಿವಿ ದೃಶ್ಯಗಳು ಬಂದ್ ಆಗಿದ್ದರಿಂದ ಭದ್ರತಾ ಮೇಲ್ವಿಚಾರಣೆಯಲ್ಲಿ ಭಾರೀ ಹಿನ್ನಡೆಯಾಗಿತ್ತು. ಆದರೂ ಪಟ್ಟುಬಿಡದ ಪೊಲೀಸರು, ವಿಷಯ ತಿಳಿಯುತ್ತಿದ್ದಂತೆಯೇ ಮೇಲಾಧಿಕಾರಿಗಳಿಗೆ ಮಾಹಿತಿ ರವಾನಿಸಿ, ತಕ್ಷಣವೇ ಪರ್ಯಾಯ ವ್ಯವಸ್ಥೆಗಳನ್ನು ಸಿದ್ಧಪಡಿಸಿ ಪಂದ್ಯದ ಭದ್ರತೆ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago