ರಾಜ್ಯ

ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ: ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭದ್ರತಾ ಲೋಪದ ಆರೋಪ ಕಂಡು ಬಂದಿದೆ.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸಂವಿಧಾನದ ಆಶಯಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಲ್ಲಿ ಏಕಕಾಲಕ್ಕೆ ಬೀದರ್‌ನಿಂದ ಚಾಮರಾಜನಗರದವರೆಗೆ ಹಮ್ಮಿಕೊಳ್ಳಲಾಗಿದ್ದ ಸುಮಾರು ೨,೫೦೦ ಕಿ.ಮೀ. ಬೃಹತ್‌ ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧ ಪೂರ್ವದ್ವಾರದ ಮೆಟ್ಟಿಲುಗಳ ಮೇಲೆ ನಗಾರಿ ಬಾರಿಸುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಯುವಕನೊಬ್ಬ ಏಕಾಏಕಿ ಕೇಸರಿ ಶಾಲು ಹಿಡಿದು ಸಿಎಂ ಸಿದ್ದರಾಮಯ್ಯ ಕುಳಿತಿದ್ದ ವೇದಿಕೆಯ ಬಳಿ ಮೆಟ್ಟಿಲುಗಳ ಮೂಲಕ ನುಗ್ಗಿದ್ದಾನೆ.

ಆ ವೇಳೆ ವೇದಿಕೆಯಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ತಡೆದು ತಕ್ಷಣ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಯುವಕನನ್ನು ಮಹದೇವ್‌ ನಾಯಕ ಎಂದು ಗುರುತಿಸಲಾಗಿದೆ.

ಕಳೆದ ಒಂದು ವಾರದಿಂದ ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಆ ಯುವಕ ಯತ್ನಿಸುತ್ತಿದ್ದ ಎಂದು ಹೇಳಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯರ ಮೇಲಿನ ಪ್ರೀತಿಯಿಂದ ಇಂದು ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಮಧ್ಯೆ ಸೇರಿಕೊಂಡು, ಆ ನಂತರ ಅವರಿಗೆ ಶಾಲು ಹೊದಿಸಲು ಬಂದಿದ್ದ ಎಂದು ಕೆಲವು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೊಲೀಸರು ಬಂಧಿತ ಯುವಕನನ್ನು ವಿಧಾನಸೌಧ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈತ ಮೂಲತಃ ಉತ್ತರ ಕರ್ನಾಟಕದವನಾಗಿದ್ದು, ಪ್ರಸ್ತುತ ಬೆಂಗಳೂರಿನ ಬನಶಂಕರಿಯಲ್ಲಿ ವಾಸವಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

22 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 days ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago