ಉಡುಪಿ: ಸಿದ್ದರಾಮಯ್ಯ ಗ್ಯಾರಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದು, ಅವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನ್ನಿಸುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಇದನ್ನು ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದು ಕಿಡಿಕಾರಿದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಇಂಡಸ್ಟ್ರಿಗೆ ಎಚ್ಚರಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡಿಕೆಶಿ ಹತಾಶೆಯಿಂದ ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಪಕ್ಷದಲ್ಲಿ ಗೊಂದಲ, ಸಿಎಂ ಆಗಬೇಕು ಎನ್ನುವ ಆಸೆಯಿಂದ ಈ ರೀತಿ ಮಾಡುತ್ತಿದ್ದಾರೆ. ರಾಜಣ್ಣ ಸಹಿತ ಇತರ ಸಚಿವರ ಹೇಳಿಕೆಯಿಂದ ಇದು ಅರಿವಾಗುತ್ತದೆ. ಡಿಕೆಶಿಯವರು ವಿಚಲಿತರಾಗಿದ್ದಾರೆ ಎಂದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…