ರಾಜ್ಯ

ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿ : KPCL ನೌಕರರ ಶ್ರಮಕ್ಕೆ ಸಿಎಂ ಮೆಚ್ಚುಗೆ

ಬೆಂಗಳೂರು  : ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಈಗ ಸ್ವಾವಲಂಭಿಯಾಗಿದ್ದು, ಇದರಲ್ಲಿ KPCL ನೌಕರರ ಶ್ರಮ ಅಪಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ನುಡಿದರು.

ಕರ್ನಾಟಕ ವಿದ್ಯುತ್ ನಿಗಮ‌ ನಿಯಮಿತದ 56 ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ. ಅತೀ ಹೆಚ್ಚು ಕಾಲ KPCL ಅಧ್ಯಕ್ಷನಾಗಿ ಸಂಸ್ಥೆಯ ಬೆಳವಣಿಗೆಗೆ ಸಾಕ್ಷಿಯಾಗಿದ್ದೇನೆ ಎಂದರು.

ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ KPCL ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡ ಉತ್ತಮವಾಗಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ ಎಂದರು.

ನಮ್ಮ ಮೇಲೆ, ಅಧಿಕಾರಿಗಳ ಮೇಲೆ ಸಮಾಜದ ಋಣ ಇದೆ. ನಾವಾಗಲೀ, ಅಧಿಕಾರಿಗಳಾಗಲೀಸಮಾಜದ ಹಣದಲ್ಲಿ ಬೆಳೆದಿದ್ದೇವೆ. ಆದ್ದರಿಂದ ಸಮಾಜದ ಋಣ ತೀರಿಸುವ ಕಾಳಜಿಯಿಂದ ಕೆಲಸ ಮಾಡಬೇಕಿದೆ ಎಂದರು.

ನಾವು ಓದುವಾಗ ಊರಲ್ಲಿ ಕರೆಂಟ್ ಇರಲಿಲ್ಲ. ಸೀಮೆಎಣ್ಣೆ ದೀಪದಲ್ಲಿ ಓದಿ ಮೇಲೆ ಬಂದೆವು. ನಾನು 8 ನೇ ತರಗತಿಗೆ ಬಂದಾಗ ಊರಿಗೆ ಕರೆಂಟ್ ಬಂತು. ಈಗ ವರ್ಷಕ್ಕೆ 20 ಸಾವಿರ ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣವನ್ನು ರೈತರ ಪರವಾಗಿ ಸರ್ಕಾರ ಕೊಡುತ್ತಿದೆ. ಕೆಪಿಸಿಎಲ್ ನೌಕರರ ಶ್ರಮದಿಂದ ವಿದ್ಯುತ್ ರೈತರಿಗೆ ತಲುಪುತ್ತಿದೆ ಎಂದರು.

ಪವನ, ಸೌರ, ಉಷ್ಣ, ಜಲ ವಿದ್ಯುತ್ ಉತ್ಪಾದನೆ ಜೊತೆಗೆ ತ್ಯಾಜ್ಯದಿಂದಲೂ ವಿದ್ಯುತ್ ಉತ್ಪಾದನೆ ಮಾಡುತ್ತಾ ದೇಶದಲ್ಲೇ ಪ್ರಮುಖ ಸ್ಥಾನದಲ್ಲಿದ್ದು ಸ್ವಾವಲಂಬನೆ ಸಾಧಿಸಿದ್ದೀವಿ. 60 ಸಾವಿರ ಮೆ.ವ್ಯಾ ಉತ್ಪಾದನೆ ಮಾಡುವ ಗುರಿ ಎಡೆಗೆ ನಾವು ಸಾಗುತ್ತಿದ್ದೇವೆ ಎಂದರು.

ತಲಾ ಆದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎನ್ನುವ ವರದಿಗಳು ಬಂದಿವೆ. ಈ ಸಾಧನೆ ನಾವು ಮಾಡಿದ್ದೇವೆ ಎಂದರು.

ನಮ್ಮಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇದೆ. ಇದು ಹೋಗಬೇಕಾದರೆ ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು.‌ ನಮಗೆ ಶಿಕ್ಷಣ ಸಿಕ್ಕ ಮೇಲೆ ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಶಿಕ್ಷಣ ಕಲಿತವರೂ ಜಾತಿವಾದಿಗಳಾಗಿ, ದ್ವೇಷವಾದಿಗಳಾಗುತ್ತಿದ್ದಾರೆ ಎಂದರು.

ಮನುಷ್ಯರ ನಡುವೆ ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತಿ ಸಮಾಜವನ್ನು ವಿಭಜಿಸುವವರಿಂದ ನೀವೆಲ್ಲರೂ ದೂರ ವಿರಿ. ಕುವೆಂಪು ಅವರ ಆಶಯದಂತೆ ವಿಶ್ವ ಮಾನವರಾಗೋಣ ಎಂದು ಕರೆ ನೀಡಿದರು.

KPCL ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

45 mins ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

58 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

1 hour ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

1 hour ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

1 hour ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago