Mysore
25
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಅವರ ನಿಧನವಾರ್ತೆ ನೋವುಂಟು ಮಾಡಿದೆ.

ಸುದೀರ್ಘ 30 ವರ್ಷಗಳ ತಮ್ಮ ವೃತ್ತಿ ಜೀವನದಲ್ಲಿ ಪತ್ರಿಕಾ ಧರ್ಮಕ್ಕೆ ನಿಷ್ಠರಾಗಿದ್ದರು. ಆಕಾಶವಾಣಿ ಹಾಗೂ ದೂರದರ್ಶನದಲ್ಲಿ ಅರೆಕಾಲಿಕ ಸುದ್ದಿ ಸಂಪಾದಕರಾಗಿ, ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ, ಪ್ರೆಸ್‌ಕ್ಲಬ್‌ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Tags:
error: Content is protected !!