ಬೆಂಗಳೂರು : ಹಿರಿಯ ಪತ್ರಕರ್ತರು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರಾದ ಅರ್ಜುನ್ ದೇವ್ ಅವರು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.
ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಕೆಯುಡಬ್ಲೂಜೆ ಸಂತಾಪ: ಹಿರಿಯ ಪತ್ರಕರ್ತರದ ಅರ್ಜುನ್ ದೇವ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ.
ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…
ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…