ಬೆಂಗಳೂರು : ಹಿರಿಯ ಪತ್ರಕರ್ತರು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರಾದ ಅರ್ಜುನ್ ದೇವ್ ಅವರು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.
ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಕೆಯುಡಬ್ಲೂಜೆ ಸಂತಾಪ: ಹಿರಿಯ ಪತ್ರಕರ್ತರದ ಅರ್ಜುನ್ ದೇವ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ.
ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…