ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಸಂಶೋಧಕ, ಗೋಕಾಕ್ ಚಳುವಳಿಯ ಮುಂಚೂಣಿಯ ನಾಯಕರಾಗಿದ್ದ ಡಾ.ಪಿ.ವಿ ನಾರಾಯಣ ಅವರು (82) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ನಗರದ ಜಯನಗರದಲ್ಲಿರುವ ಅವರ ನಿವಾಸದಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಪಿವಿ ನಾರಾಯಣ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ 1942ರ ಡಿ.18 ರಂದು ಜನಿಸಿದರು. ಮೈಸೂರು ವಿವಿಯಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲೀಷ್ನಲ್ಲಿ ಸ್ನಾತಕೋತ್ತರ ಪದವಿ, ಬೆಂಗಳೂರು ವಿವಿಯಿಂದ “ವಸನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಪ್ರಬಂಧಕ್ಕೆ ಪಿಎಚಹ್ಡಿ ಪದವಿ ಪಡೆದಿದ್ದರು.
ಕರ್ನಾಟಕದ ಹಿತಚಿಂತಕರಾಗಿ, ಕನ್ನಡ ಪರ ಹೋರಾಟಗಾರರಾಗಿ, ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದರು. ವಿಮರ್ಶೆ, ಕಾಯಕತ್ವ, ಚಂಪೂಕವಿಗಳು, ವಚನ ಚಳುವಳಿ, ವಚನ ವ್ಯಾಸಂಗ, ಪಂಪ ರಾಮಾಯಣ, ಅಂತರ, ವಿಕಾಸ, ಶೋಧನೆ ಸೇರದಂತೆ ಒಟ್ಟು 45ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…