ರಾಜ್ಯ

ಹಿರಿಯ ಸಾಹಿತಿ, ಸಂಶೋಧಕ ಪಿ.ವಿ ನಾರಾಯಣ ನಿಧನ

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಸಂಶೋಧಕ, ಗೋಕಾಕ್‌ ಚಳುವಳಿಯ ಮುಂಚೂಣಿಯ ನಾಯಕರಾಗಿದ್ದ ಡಾ.ಪಿ.ವಿ ನಾರಾಯಣ ಅವರು (82) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ನಗರದ ಜಯನಗರದಲ್ಲಿರುವ ಅವರ ನಿವಾಸದಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಪಿವಿ ನಾರಾಯಣ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ 1942ರ ಡಿ.18 ರಂದು ಜನಿಸಿದರು. ಮೈಸೂರು ವಿವಿಯಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲೀಷ್‌ನಲ್ಲಿ ಸ್ನಾತಕೋತ್ತರ ಪದವಿ, ಬೆಂಗಳೂರು ವಿವಿಯಿಂದ “ವಸನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಪ್ರಬಂಧಕ್ಕೆ ಪಿಎಚಹ್‌ಡಿ ಪದವಿ ಪಡೆದಿದ್ದರು.

ಕರ್ನಾಟಕದ ಹಿತಚಿಂತಕರಾಗಿ, ಕನ್ನಡ ಪರ ಹೋರಾಟಗಾರರಾಗಿ, ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದರು. ವಿಮರ್ಶೆ, ಕಾಯಕತ್ವ, ಚಂಪೂಕವಿಗಳು, ವಚನ ಚಳುವಳಿ, ವಚನ ವ್ಯಾಸಂಗ, ಪಂಪ ರಾಮಾಯಣ, ಅಂತರ, ವಿಕಾಸ, ಶೋಧನೆ ಸೇರದಂತೆ ಒಟ್ಟು 45ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

22 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

22 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

22 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

22 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

23 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

23 hours ago