ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಥೆಗಾರ ಡಾ.ಮೊಗಳ್ಳಿ ಗಣೇಶ್ ಅವರಿಂದು ಹೊಸಪೇಟೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
1963ರ ಜುಲೈ.1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನಹಳ್ಳಿಯಲ್ಲಿ ಜನಿಸಿದ ಡಾ.ಮೊಗಳ್ಳಿ ಗಣೇಶ್ ಅವರು ಕನ್ನಡದ ಪ್ರಮುಖ ಕಥೆಗಾರ, ಪ್ರಬಂಧಕಾರ, ಕಾದಂಬರಿಕಾರ ಹಾಗೂ ವೈಚಾರಿಕ ಚಿಂತಕರಾಗಿದ್ದರು.
ಹಂಪಿ ಕನ್ನಡ ವಿಶ್ವವಿಶ್ವವಿದ್ಯಾನಿಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದ ಅವರು ಸದ್ಯ ಜಾನಪದ ವಿಭಾಗದ ಮುಖ್ಯಸ್ಥರಾಗಿದ್ದರು.
ಇದನ್ನೂ ಓದಿ:-ಓದುಗರ ಪತ್ರ: ಮಾದಾಪುರ ಕೆಜಿಬಿ ಬ್ಯಾಂಕ್ಗೆ ಅಗತ್ಯ ಸಿಬ್ಬಂದಿ ನೇಮಿಸಿ
ಸಾಹಿತಿ ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಸಂತಾಪ ಸೂಚಿಸಿದ್ದು, ಕನ್ನಡ ಸಾಹಿತ್ಯಕ್ಕೆ ಮೊಗಳ್ಳಿ ಗಣೇಶ್ ಅವರ ಕೊಡುಗೆ ಗಮನಾರ್ಹ. ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಸೂರ್ಯನನ್ನು ಬಚ್ಚಿಡಬಹುದೇ? ಮತ್ತು ಅನಾದಿ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು ಎಂದು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…