ಬೆಂಗಳೂರು: ಪಿಎಸ್ಐ ಪರೀಕ್ಷೆಯನ್ನು ಸೆಪ್ಟೆಂಬರ್.22ರ ಬದಲು ಸೆಪ್ಟೆಂಬರ್.28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಯುಪಿಎಸ್ಸಿ ಪರೀಕ್ಷೆ ಹಾಗೂ ಪಿಎಸ್ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಎಲ್ಲರೂ ಐಪಿಎಸ್ ಪರೀಕ್ಷೆ ಮುಂದೂಡಿಕೆ ಮಾಡಲು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ಐ ಪರೀಕ್ಷೆಯನ್ನು ಸೆಪ್ಟೆಂಬರ್.28ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕೆಯನ್ನು ಸೆಪ್ಟೆಂಬರ್.22ರಂದು ನಡೆಸಲು ನಿರ್ಧಾರ ಮಾಡಲಾಗಿತ್ತು.
ಅದೇ ದಿನ ಯುಪಿಎಸ್ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಕೆಲವರು ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹಾಕಿದ್ದರು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದು ಹೇಳಿತ್ತು. ಇದೀಗ ಗೃಹ ಸಚಿವ ಜಿ.ಪರಮೇಶ್ವರ್ ಈ ಗೊಂದಲಕ್ಕೆ ತೆರೆ ಎಳೆದಿದ್ದು, ಸೆಪ್ಟೆಂಬರ್.28ಕ್ಕೆ ಪಿಎಸ್ಐ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ…
ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…