ಬೆಂಗಳೂರು: ಪಿಎಸ್ಐ ಪರೀಕ್ಷೆಯನ್ನು ಸೆಪ್ಟೆಂಬರ್.22ರ ಬದಲು ಸೆಪ್ಟೆಂಬರ್.28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಯುಪಿಎಸ್ಸಿ ಪರೀಕ್ಷೆ ಹಾಗೂ ಪಿಎಸ್ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿತ್ತು. ಈ ವಿಚಾರವಾಗಿ ಎಲ್ಲರೂ ಐಪಿಎಸ್ ಪರೀಕ್ಷೆ ಮುಂದೂಡಿಕೆ ಮಾಡಲು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ಐ ಪರೀಕ್ಷೆಯನ್ನು ಸೆಪ್ಟೆಂಬರ್.28ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕೆಯನ್ನು ಸೆಪ್ಟೆಂಬರ್.22ರಂದು ನಡೆಸಲು ನಿರ್ಧಾರ ಮಾಡಲಾಗಿತ್ತು.
ಅದೇ ದಿನ ಯುಪಿಎಸ್ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಕೆಲವರು ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹಾಕಿದ್ದರು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದು ಹೇಳಿತ್ತು. ಇದೀಗ ಗೃಹ ಸಚಿವ ಜಿ.ಪರಮೇಶ್ವರ್ ಈ ಗೊಂದಲಕ್ಕೆ ತೆರೆ ಎಳೆದಿದ್ದು, ಸೆಪ್ಟೆಂಬರ್.28ಕ್ಕೆ ಪಿಎಸ್ಐ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…