ರಾಜ್ಯ

ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸರಣಿ ಸಾವು : ರಾಯಚೂರಲ್ಲಿ ಮತ್ತೊಂದು ಘಟನೆ

ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ರಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ.

ಮೃತ ಬಾಣಂತಿಯ ಹೆಸರು ಸರಸ್ವತಿ (24) ಎಂದು ಗುರುತಿಸಲಾಗಿದ್ದು, ಈಕೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದವರು ಎಂದು ತಿಳಿದುಬಂದಿದೆ.

ಜ.2 ರಂದು ಗರ್ಭಿಣಿ ಸರಸ್ವತಿಗೆ ಹೊಟ್ಟೆ ನೋವಿನ ಕಾರಣ ಜಿಲ್ಲೆಯ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಸಿಸೇರಿಯನ್‌ ಹೆರಿಗೆಯ ಮೂಲಕ ನಾಲ್ಕನೇ ಮಗುವಿಗೆ ಜನ್ಮ ನೀಡಿದ ಸರಸ್ವತಿ, ಜ.5 ರಂದು ಅಧಿಕ ರಕ್ತದೊತ್ತಡದಿಂದ ಮೃತಪಟ್ಟಿದ್ದಾರೆ. ಸದ್ಯ ಶಿಶುವಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸರಸ್ವತಿ ಸಾವಿನಿಂದ ಕುಟುಂಬ ಕಂಗಲಾಗಿದ್ದಾರೆ.

ಜಿಲ್ಲೆಯಲ್ಲಿ ಕಳೆದ 4 ತಿಂಗಳಿಂದ ಒಟ್ಟು 12 ಬಾಣಂತಿಯರು ಮೃತಪಟ್ಟಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

2 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

2 hours ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

2 hours ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

2 hours ago

ಗಜಪಯಣಕ್ಕೆ ನಡೆದಿದೆ ಭರದ ಸಿದ್ಧತೆ

ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು  ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…

2 hours ago