ರಾಜ್ಯ

ದಿನಗೂಲಿ ನೌಕರರ ಸೇವೆ ಕಾಯಂಗೆ ಅರ್ಹ: ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು: ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಗಳಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಈ ಸಂಬಂಧ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಡಕೋಳ ಗ್ರಾಮದ ಶಾಂತಲಕ್ಷ್ಮೀ ಕೋಂ ಗುಂಡೂರಾವ್‌ ಸೇರಿದಂತೆ 30ಕ್ಕೂ ಹೆಚ್ಚು ನೌಕರರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ಯಾಮ್‌ ಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠವು ಅರ್ಜಿದಾರರನ್ನು ಮೂರು ತಿಂಗಳ ಒಳಗಾಗಿ ಸೂಕ್ತ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಮೂಲಕ ಅರ್ಜಿದಾರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ.

ಒಂದೇ ಬಗೆಯ ಉದ್ಯೋಗ ಮಾಡುವವರನ್ನು ಭಿನ್ನ ರೀತಿಯಲ್ಲಿ ನೋಡಲಾಗದು. ಅರ್ಜಿದಾರರು 10 ವರ್ಷಗಳಿಂದ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಅವರನ್ನು ಹಂಗಾಮಿ ನೌಕರರಾಗಿಯೇ ಮುಂದುವರಿಸಲಾಗದು. ಅವರಿಗೆ ಅರ್ಹ ವೇತನ ಮತ್ತು ಭತ್ಯೆಯನ್ನು ನೀಡಬೇಕಾಗುತ್ತದೆ ಎಂದು ವಿವರ ನೀಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

9 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

12 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago