Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು : ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಬಳಿಕ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದರು.
ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಬೇಕಿದೆ. ಆದರೆ ಕೇವಲ ಬೆಂಗಳೂರು ಸಂಬಂಧಿತ ಮಸೂದೆಗಳನ್ನು ತರುತ್ತಿದ್ದಾರೆ. ಹೀಗಾದರೆ ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವ ಅಗತ್ಯವಿಲ್ಲ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕಿದೆ. 8 ದಿನದ ಬದಲು 20 ದಿನಗಳ ಕಾಲ ಅಧಿವೇಶನ ನಡೆಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಕಳೆದ ಸಲ ಕೊನೆಯ ಎರಡು-ಮೂರು ದಿನ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ಒಂದಷ್ಟು ಭರವಸೆಗಳನ್ನು ನೀಡಿದ್ದರು. ಅದನ್ನು ಇಂದಿಗೂ ಈಡೇರಿಸಿಲ್ಲ ಎಂದರು.
ಇದನ್ನೂ ಓದಿ:-ಮೈಸೂರು | ಡಿ.1 ರಿಂದ ಒನ್ ನೇಷನ್ ಒನ್ ಕಾರ್ಡ್ ಜಾರಿ : ಸಾರಿಗೆ ಸಚಿವ ರಾಮಲಿಂಗರೆಡ್ಡಿ
ತುಂಗಭದ್ರಾ ಜಲಾಶಯದ ಗೇಟ್ ದುರಸ್ತಿಯ 12 ಕೋಟಿ ರೂ. ಬಿಲ್ ಇನ್ನೂ ಪಾವತಿಸಿಲ್ಲ. ಇದರಿಂದಾಗಿ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿದ್ದಾರೆ. ಒಟ್ಟು 32 ಗೇಟ್ಗಳನ್ನು ಅಳವಡಿಸಬೇಕಿದೆ. ಎರಡನೇ ಬೆಳೆಗೆ ರೈತರಿಗೆ ನೀರು ದೊರೆಯುತ್ತಿಲ್ಲ. ಎಕರೆಗೆ 25,000 ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ. ಈಗಿನ ಸನ್ನಿವೇಶ ನೋಡಿದರೆ ಮುಂದಿನ ವರ್ಷಕ್ಕೂ ನೀರು ಸಿಗುವುದಿಲ್ಲ ಎನ್ನಿಸಿದೆ. ಈ ಸರ್ಕಾರ ಉತ್ತರ ಕರ್ನಾಟಕದ ರೈತರಿಗೆ ಮೋಸ ಮಾಡಿದೆ. ಜೊತೆಗೆ ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿಲ್ಲ. ಮೆಕ್ಕೆಜೋಳದ ಖರೀದಿ ಕೇಂದ್ರ ಆರಂಭಿಸಿಲ್ಲ. ಈ ಎಲ್ಲ ವಿಷಯಗಳನ್ನು ಮೊದಲಿಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆ ಎರಡೂ ಸದನದಲ್ಲಿ ಚರ್ಚಿಸಲಾಗುವುದು ಎಂದರು.
ಬಡವರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಈ ಮೂಲಕ ಗ್ಯಾರಂಟಿಗಳನ್ನು ತಪ್ಪಿಸಬಹುದು ಎಂದು ಸರ್ಕಾರ ಅಂದುಕೊಂಡಿದೆ. ಬಿಜೆಪಿ ಇದ್ದಾಗ ಬಗರ್ಹುಕುಂ ಸಾಗುವಳಿಗೆ ಮಂಜೂರಾತಿ ನೀಡಲಾಗಿತ್ತು. ಕಾಂಗ್ರೆಸ್ ಬಂದ ನಂತರ ಈ ಕೆಲಸ ಆಗಿಲ್ಲ. ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಜೈಲುಗಳಲ್ಲಿ ಮದ್ಯ ತಯಾರಿ ಕೇಂದ್ರ ಆರಂಭವಾಗಿದೆ. ಭಯೋತ್ಪಾದಕ ಕೈದಿಗಳ ಕೈಗೆ ಮೊಬೈಲ್ ಬಂದಿದೆ. ಆದರೆ ಗೃಹಸಚಿವರು ಈ ವೀಡಿಯೋ ಸೋರಿಕೆ ಮಾಡಿದವರನ್ನು ಪತ್ತೆ ಮಾಡಲು ಪ್ರಯತ್ನಿಸಿದ್ದಾರೆ. ಇಷ್ಟು ದಿನ ಕಳ್ಳರು ದರೋಡೆ ಮಾಡುತ್ತಿದ್ದರೆ, ಈಗ ಪೊಲೀಸರೇ ದರೋಡೆಗೆ ಇಳಿದಿದ್ದಾರೆ. ಹಗಲಿನಲ್ಲೇ ರಾಜಧಾನಿಯಲ್ಲಿ 7 ಕೋಟಿ ರೂ. ದರೋಡೆಯಾಗಿದೆ ಎಂದರು.
ಸರ್ಕಾರಿ ಶಾಲೆಗಳ ದುಸ್ಥಿತಿ, ಶಿಕ್ಷಕರ ನೇಮಕ, ಬೆಂಗಳೂರಿನಲ್ಲಿ ಗುಂಡಿ ರಸ್ತೆಗಳಿಂದಾಗಿ ಜನರ ಮರಣ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು. ಪೊಲೀಸ್ ಠಾಣೆಗಳಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುತ್ತೇವೆ ಎಂದರು.
ಸಿಎಂ ಯಾರೆಂದು ಗೊತ್ತಿಲ್ಲ
ಸಿಎಂ ಯಾರೆಂದು ಗೊತ್ತಾಗದೆ ಇಬ್ಬರೂ ನಾಯಕರ ನಡುವೆ ಕಾದಾಟ ಜೋರಾಗಿದೆ. ಸಿದ್ದರಾಮಯ್ಯ ಎಂದರೆ ಮಾತು ತಪ್ಪಿದವರು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದರಿಂದಾಗಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ. ಸರ್ಕಾರದಲ್ಲಿ ಎಲ್ಲರೂ ಕೆಲಸ ಮಾಡುವುದನ್ನು ಬಿಟ್ಟು ಸಿಎಂ ಯಾರೆಂದು ಚರ್ಚಿಸುತ್ತಿದ್ದಾರೆ. ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಜಗಳ ಬಿಟ್ಟು ಬೇರೇನೂ ಆಗುವುದಿಲ್ಲ. ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಡಿ.ಕೆ.ಶಿವಕುಮಾರ್ ನೇರವಾಗಿ ಹೇಳಿದ್ದು, ಈ ಬಗ್ಗೆ ದುರ್ಬಲ ಹೈಕಮಾಂಡ್ ಪ್ರತಿಕ್ರಿಯೆ ನೀಡುತ್ತಿಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿದೇಶಕ್ಕೆ ಪಲಾಯನ ಮಾಡಿದ್ದಾರೆ ಎಂದರು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…