ರಾಜ್ಯ

ನ.2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ ಆರ್‌ಎಸ್‌ಎಸ್‌ಗೆ ಹಿನ್ನಡೆ

ಕಲಬುರ್ಗಿ : ನವೆಂಬರ್.‌2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಸಂಬಂಧ ವಿಚಾರಣೆಯನ್ನು ಕೋರ್ಟ್‌ ಮುಂದೂಡಿದೆ.

ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ ಹೈಕೋರ್ಟ್‌ ವಿಭಾಗೀಯ ಪೀಠ ನವೆಂಬರ್.‌5ರಂದು ಬೆಂಗಳೂರಿನಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ.

ಹೀಗಾಗಿ ನವೆಂಬರ್.‌2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್‌ಎಸ್‌ಎಸ್‌ಗೆ ತೀವ್ರ ಹಿನ್ನಡೆಯಾಗಿದೆ.

ಇದನ್ನೂ ಓದಿ:-ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಶಾಂತಿ ಸಭೆ ಅಶಾಂತಿಯಲ್ಲಿ ಅಂತ್ಯಗೊಂಡಿರುವುದರಿಂದ ಅಸಮಾಧಾನಗೊಂಡ ನ್ಯಾಯಾಲಯ ಜಿಲ್ಲಾಡಳಿತ ಯಾವುದೇ ಸೂಕ್ತ ನಿರ್ಧಾರ ಕೈಗೊಳ್ಳದಿರುವುದರಿಂದ ಮತ್ತೊಂದು ಸುತ್ತಿನ ಶಾಂತಿ ಸಭೆ ನಡೆಸಲು ಸೂಚನೆ ನೀಡಿದೆ.

ಮುಂದಿನ ವಿಚಾರಣೆಯನ್ನು ನವೆಂಬರ್.‌7ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ನವೆಂಬರ್.‌2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಬ್ರೇಕ್‌ ಹಾಕಲಾಗಿದ್ದು, ನವೆಂಬರ್.‌5ರ ಶಾಂತಿ ಸಭೆ ಆಧರಿಸಿ ಕೋರ್ಟ್‌ ತನ್ನ ತೀರ್ಪು ಪ್ರಕಟಿಸಲಿದೆ.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

37 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago