Mysore
21
overcast clouds

Social Media

ಗುರುವಾರ, 22 ಮೇ 2025
Light
Dark

ಕನಕಪುರದಲ್ಲಿ ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿ ೭ ಜನರ ಮೇಲೆ ಹಲ್ಲೆ

ರಾಮನಗರ:  ೨ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿ ೭ ಜನರ ಮೇಲೆ  ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್‌ ಕೆ ಕಾಲೋನಿಯಲ್ಲಿ ನಡೆದಿದೆ.

ಗಡಿಪಾರು ರೌಡಿ ಶೀಟರ್‌ ಹರ್ಷ ಮತ್ತು ತಂಡದಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದ್ದು, ಘಟನೆ ಸಂಬಂಧವಾಗಿ ಕೆಲವರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಗಲಾಟೆಯಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್‌ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್‌ ಕಾರ್ತಿಕ್‌ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಡಿಸಿಗೆ ಮನವಿ ಮಾಡಲಾಗಿದೆ. ಈ ಘಟನೆಯಿಂದ ಬಡಾವಣೆಯಲ್ಲಿ ಆತಂಕ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಇನ್ನು ಈ ಸಂಬಂಧ ಕನಕಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Tags: