ರಾಜ್ಯ

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ.

ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಕನಿಷ್ಠ ತಾಪಮಾನ ಹೆಚ್ಚು ಕಡಿಮೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ತಾಪಮಾನ ೧೦ ರಿಂದ ೧೨ ಡಿ.ಸೆಂ., ದಕ್ಷಿಣ ಒಳನಾಡಿನಲ್ಲಿ ೧೨ ರಿಂದ ೧೪ ಡಿ.ಸೆಂ. ಹಾಗೂ ಕರಾವಳಿ ಭಾಗದಲ್ಲಿ ೧೯ ರಿಂದ ೨೦ ಡಿ.ಸೆಂ. ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಇನ್ನೂ ಐದಾರು ದಿನಗಳ ಕಾಲ ಇದೇ ರೀತಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ೧೪ ರಿಂದ ೧೫ ಡಿ.ಸೆಂ. ನಷ್ಟು ಕಂಡುಬರುತ್ತಿದೆ. ರಾಜ್ಯದ ಕೆಲವೆಡೆ ಬೆಳಗಿನ ವೇಳೆ ದಟ್ಟವಾದ ಮಂಜು ಆವರಿಸುತ್ತಿದೆ. ಡಿಸೆಂಬರ್‌ನಲ್ಲಿ ಬೆಳಗಿನ ವೇಳೆ ಬಹುತೇಕ ಕಡೆಗಳಲ್ಲಿ ಮಂಜು ಕವಿಯುವುದು ಸರ್ವೆ ಸಾಮಾನ್ಯವಾಗಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಶೀತ ಗಾಳಿ ಮತ್ತ ದಟ್ಟವಾದ ಮಂಜು ಚಳಿಗಾಲದಲ್ಲಿ ಕಂಡುಬರುತ್ತಿರುವುದು ಅಚ್ಚರಿ ಎನಿಸಿದರೂ ಇದು ನಿಸರ್ಗದತ್ತ ಸಹಜ ಪ್ರಕ್ರಿಯೆಯಾಗಿದೆ. ಉತ್ತರ ಭಾರತದ ಬಯಲುಸೀಮೆಯಲ್ಲಿ ಸಾಮಾನ್ಯವಾಗಿ ಇಂತಹ ವಾತಾವರಣ ಕಂಡುಬರುವುದು ವಾಡಿಕೆ. ಆದರೆ ಉಷ್ಣವಲಯವಾದ ಬೆಂಗಳೂರಿನಲ್ಲಿ ಶೀತಗಾಳಿ, ದಟ್ಟ ಮಂಜು ಕಂಡುಬರುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಇದು ಅಸಹಜ ಪ್ರಕ್ರಿಯೆ ಅಲ್ಲ. ಇದು ವಾತಾವರಣದ ಸಹಜ ಪ್ರಕ್ರಿಯೆಯಾಗಿದೆ. ಪ್ರಕೃತಿಯು ಭೌತಿಕ ತತ್ವಗಳನ್ನು ಚಾಚೂ ತಪ್ಪದೇ ಅನುಸರಿಸುತ್ತಿದೆ. ಹೀಗಾಗಿ ಮೇಲ್ನೊಟಕ್ಕೆ ಅಚ್ಚರಿ ಎನ್ನಿಸುತ್ತಿದೆ. ಹಗಲಿನಲ್ಲಿ ನಿರ್ಮಲವಾದ ಆಕಾಶವಿದ್ದು, ಬಿಸಿಲು ಹೆಚ್ಚಾಗಿರುವುದರಿಂದ ರಾತ್ರಿ ವೇಳೆಯಷ್ಟೆ ತೀವ್ರತರವಾಗಿ ವಾತಾವರಣ ತಂಪಾಗುತ್ತದೆ. ಇದರಿಂದ ಚಳಿ ಹೆಚ್ಚಿರುವುದಲ್ಲದೆ ಇಬ್ಬನಿಯೂ ಸಾಕಷ್ಟು ಬೀಳುತ್ತದೆ ಎಂದು ಅವರು ವಿಶ್ಲೇಷಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ  ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ…

27 mins ago

‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳಲ್ಲಿ ರಂಗಶಿಕ್ಷಣ ನೀಡಿ’

ಗಿರೀಶ್ ಹುಣಸೂರು ಕೆಪಿಎಸ್, ಪಿಎಂಶ್ರೀ ಶಾಲೆಗಳಲ್ಲಿ ರಂಗಶಿಕ್ಷಕರ ನೇಮಕಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮೈಸೂರು: ಇಂದಿನ ಮಕ್ಕಳಲ್ಲಿ…

32 mins ago

1000 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣಕ್ಕೆ ಎಂಡಿಎ ಪ್ಲಾನ್!

ಕೆ.ಬಿ.ರಮೇಶನಾಯಕ ಮೈಸೂರು: ಹಲವು ಅವ್ಯವಹಾರಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿ ಯಾಗಿದ್ದ ಹಿಂದಿನ ಮುಡಾ, ಎಂಡಿಎ ಆಗಿ ಪರಿವರ್ತನೆಯಾದ…

36 mins ago

ಮಾನವತೆಯ ಸಂದೇಶ ಸಾರಿದ ಯತೀಂದ್ರ

ಡಾ.ಎಸ್‌. ಕೃಷ್ಣಪ್ಪ ಕಿತ್ತೂರು  ಇಂದು ಕೈವಾರ ತಾತಯ್ಯ ಅವರ ಜಯಂತಿ ‘ಉತ್ತಮ ಕುಲವೆಂದು ಹೇಳುವ ಮಾತು ಯುಕ್ತವಲ್ಲಣ್ಣ’... ೧೮ನೇ ಶತಮಾ…

40 mins ago

ಪ್ರಮುಖ ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳ ಹೋರಾಟ

ವಿಶ್ವಪ್ರಸಾದ್ ಆಳ್ವ ಒಂದೆರಡು ವರ್ಷಗಳ ಹಿಂದೆ ದೇಶದ ಹಣಕಾಸು ಸಚಿವರು ಮೂಲ ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್…

46 mins ago

ಇರಾನ್ ಸಂಘರ್ಷದ ಪೂರ್ವಾಪರ

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ…

50 mins ago