ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ.
ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಕನಿಷ್ಠ ತಾಪಮಾನ ಹೆಚ್ಚು ಕಡಿಮೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ತಾಪಮಾನ ೧೦ ರಿಂದ ೧೨ ಡಿ.ಸೆಂ., ದಕ್ಷಿಣ ಒಳನಾಡಿನಲ್ಲಿ ೧೨ ರಿಂದ ೧೪ ಡಿ.ಸೆಂ. ಹಾಗೂ ಕರಾವಳಿ ಭಾಗದಲ್ಲಿ ೧೯ ರಿಂದ ೨೦ ಡಿ.ಸೆಂ. ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಇನ್ನೂ ಐದಾರು ದಿನಗಳ ಕಾಲ ಇದೇ ರೀತಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ
ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ೧೪ ರಿಂದ ೧೫ ಡಿ.ಸೆಂ. ನಷ್ಟು ಕಂಡುಬರುತ್ತಿದೆ. ರಾಜ್ಯದ ಕೆಲವೆಡೆ ಬೆಳಗಿನ ವೇಳೆ ದಟ್ಟವಾದ ಮಂಜು ಆವರಿಸುತ್ತಿದೆ. ಡಿಸೆಂಬರ್ನಲ್ಲಿ ಬೆಳಗಿನ ವೇಳೆ ಬಹುತೇಕ ಕಡೆಗಳಲ್ಲಿ ಮಂಜು ಕವಿಯುವುದು ಸರ್ವೆ ಸಾಮಾನ್ಯವಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಶೀತ ಗಾಳಿ ಮತ್ತ ದಟ್ಟವಾದ ಮಂಜು ಚಳಿಗಾಲದಲ್ಲಿ ಕಂಡುಬರುತ್ತಿರುವುದು ಅಚ್ಚರಿ ಎನಿಸಿದರೂ ಇದು ನಿಸರ್ಗದತ್ತ ಸಹಜ ಪ್ರಕ್ರಿಯೆಯಾಗಿದೆ. ಉತ್ತರ ಭಾರತದ ಬಯಲುಸೀಮೆಯಲ್ಲಿ ಸಾಮಾನ್ಯವಾಗಿ ಇಂತಹ ವಾತಾವರಣ ಕಂಡುಬರುವುದು ವಾಡಿಕೆ. ಆದರೆ ಉಷ್ಣವಲಯವಾದ ಬೆಂಗಳೂರಿನಲ್ಲಿ ಶೀತಗಾಳಿ, ದಟ್ಟ ಮಂಜು ಕಂಡುಬರುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಇದು ಅಸಹಜ ಪ್ರಕ್ರಿಯೆ ಅಲ್ಲ. ಇದು ವಾತಾವರಣದ ಸಹಜ ಪ್ರಕ್ರಿಯೆಯಾಗಿದೆ. ಪ್ರಕೃತಿಯು ಭೌತಿಕ ತತ್ವಗಳನ್ನು ಚಾಚೂ ತಪ್ಪದೇ ಅನುಸರಿಸುತ್ತಿದೆ. ಹೀಗಾಗಿ ಮೇಲ್ನೊಟಕ್ಕೆ ಅಚ್ಚರಿ ಎನ್ನಿಸುತ್ತಿದೆ. ಹಗಲಿನಲ್ಲಿ ನಿರ್ಮಲವಾದ ಆಕಾಶವಿದ್ದು, ಬಿಸಿಲು ಹೆಚ್ಚಾಗಿರುವುದರಿಂದ ರಾತ್ರಿ ವೇಳೆಯಷ್ಟೆ ತೀವ್ರತರವಾಗಿ ವಾತಾವರಣ ತಂಪಾಗುತ್ತದೆ. ಇದರಿಂದ ಚಳಿ ಹೆಚ್ಚಿರುವುದಲ್ಲದೆ ಇಬ್ಬನಿಯೂ ಸಾಕಷ್ಟು ಬೀಳುತ್ತದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…