ರಾಜ್ಯ

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ ಮಂಜು ಕವಿಯುತ್ತಿರುವುದರಿಂದ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ತಜ್ಞರು ಸಲಹೆ ಮಾಡಿದ್ದಾರೆ.

ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಕನಿಷ್ಠ ತಾಪಮಾನ ಹೆಚ್ಚು ಕಡಿಮೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ ತಾಪಮಾನ ೧೦ ರಿಂದ ೧೨ ಡಿ.ಸೆಂ., ದಕ್ಷಿಣ ಒಳನಾಡಿನಲ್ಲಿ ೧೨ ರಿಂದ ೧೪ ಡಿ.ಸೆಂ. ಹಾಗೂ ಕರಾವಳಿ ಭಾಗದಲ್ಲಿ ೧೯ ರಿಂದ ೨೦ ಡಿ.ಸೆಂ. ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಇನ್ನೂ ಐದಾರು ದಿನಗಳ ಕಾಲ ಇದೇ ರೀತಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ೧೪ ರಿಂದ ೧೫ ಡಿ.ಸೆಂ. ನಷ್ಟು ಕಂಡುಬರುತ್ತಿದೆ. ರಾಜ್ಯದ ಕೆಲವೆಡೆ ಬೆಳಗಿನ ವೇಳೆ ದಟ್ಟವಾದ ಮಂಜು ಆವರಿಸುತ್ತಿದೆ. ಡಿಸೆಂಬರ್‌ನಲ್ಲಿ ಬೆಳಗಿನ ವೇಳೆ ಬಹುತೇಕ ಕಡೆಗಳಲ್ಲಿ ಮಂಜು ಕವಿಯುವುದು ಸರ್ವೆ ಸಾಮಾನ್ಯವಾಗಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಶೀತ ಗಾಳಿ ಮತ್ತ ದಟ್ಟವಾದ ಮಂಜು ಚಳಿಗಾಲದಲ್ಲಿ ಕಂಡುಬರುತ್ತಿರುವುದು ಅಚ್ಚರಿ ಎನಿಸಿದರೂ ಇದು ನಿಸರ್ಗದತ್ತ ಸಹಜ ಪ್ರಕ್ರಿಯೆಯಾಗಿದೆ. ಉತ್ತರ ಭಾರತದ ಬಯಲುಸೀಮೆಯಲ್ಲಿ ಸಾಮಾನ್ಯವಾಗಿ ಇಂತಹ ವಾತಾವರಣ ಕಂಡುಬರುವುದು ವಾಡಿಕೆ. ಆದರೆ ಉಷ್ಣವಲಯವಾದ ಬೆಂಗಳೂರಿನಲ್ಲಿ ಶೀತಗಾಳಿ, ದಟ್ಟ ಮಂಜು ಕಂಡುಬರುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಇದು ಅಸಹಜ ಪ್ರಕ್ರಿಯೆ ಅಲ್ಲ. ಇದು ವಾತಾವರಣದ ಸಹಜ ಪ್ರಕ್ರಿಯೆಯಾಗಿದೆ. ಪ್ರಕೃತಿಯು ಭೌತಿಕ ತತ್ವಗಳನ್ನು ಚಾಚೂ ತಪ್ಪದೇ ಅನುಸರಿಸುತ್ತಿದೆ. ಹೀಗಾಗಿ ಮೇಲ್ನೊಟಕ್ಕೆ ಅಚ್ಚರಿ ಎನ್ನಿಸುತ್ತಿದೆ. ಹಗಲಿನಲ್ಲಿ ನಿರ್ಮಲವಾದ ಆಕಾಶವಿದ್ದು, ಬಿಸಿಲು ಹೆಚ್ಚಾಗಿರುವುದರಿಂದ ರಾತ್ರಿ ವೇಳೆಯಷ್ಟೆ ತೀವ್ರತರವಾಗಿ ವಾತಾವರಣ ತಂಪಾಗುತ್ತದೆ. ಇದರಿಂದ ಚಳಿ ಹೆಚ್ಚಿರುವುದಲ್ಲದೆ ಇಬ್ಬನಿಯೂ ಸಾಕಷ್ಟು ಬೀಳುತ್ತದೆ ಎಂದು ಅವರು ವಿಶ್ಲೇಷಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago