ಬೆಂಗಳೂರು:ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳ ನಡೆ ವಿರೋಧಿಸಿ ನಮ್ಮ ಬೆಂಗಳೂರು ಪರಿಸರವಾದಿಗಳ ವೇದಿಕೆ ವತಿಯಿಂದ ಹೊಂಬೇಗೌಡ ನಗರದ ಗಾಂಧಿ ಪ್ರತಿಮೆ ಮುಂಭಾದಲ್ಲಿ ಮೇಣಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಯಿತು.
ವೇದಿಕೆಯ ಮುಖ್ಯಸ್ಥ ವಕೀಲ ಉಮೇಶ್ ಕುಮಾರ್ ಮಾತನಾಡಿ, ಬೆಂಗಳೂರಿನಲ್ಲಿ ಹಸುಗಳ ಕತ್ತರಿಸುವ ಕೆಚ್ಚಲುಗಳನ್ನು ಕತ್ತರಿಸಿ ವಿಕೃತಿ ಮೆರೆಯಲಾಗಿದೆ ಇದು ಅತ್ಯಂತ ಖಂಡನೀಯ, ಇಂತಹ ಕೃತ್ಯವನ್ನು ಯಾರೇ ಮಾಡಿದರೂ ತಪ್ಪು, ಬೇರೆ ಬೇರೆ ಊರುಗಳಿಂದ, ರಾಜ್ಯಗಳಿಂದ ಬಂದು ಬೆಂಗಳೂರಿನಲ್ಲಿ ವಾಸವಾಗಿರುವ ನಿವಾಸಿಗಳು ಬೆಂಗಳೂರು ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ಇದರಿಂದ ಬೆಂಗಳೂರಿನ ಮೂಲ ನಿವಾಸಿಗಳಿಗೆ ಬಾರೀ ತೊಂದರೆಯಾಗಿದೆ. ಬೆಂಗಳೂರು ಪರಿಸರವನ್ನು ಹಾಳು ಮಾಡಿ ಬೇರೆ ಊರುಗಳಿಗೆ ತೆರಳುತ್ತಾರೆ ಆದರೆ ಮೂಲ ನಿವಾಸಿಗಳು ಯಾವ ರೀತಿ ಬದುಕಬೇಕು ಎಂದು ಪ್ರಶ್ನಿಸಿದರು.
ವೇದಿಕೆಯ ಸದಸ್ಯರಾದ ಮುಖೇಶ್ ಮಾತನಾಡಿ,ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು,ಅವರಿಗೆ ಪೋಲಿಸ್ ಇಲಾಖೆ ಕ್ರೂರವಾದ ಶಿಕ್ಷೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ಮೌನ ಪ್ರತಿಭಟನೆಯಲ್ಲಿ ವೇದಿಕೆ ಸದಸ್ಯರಾದ ಮಾಜಿ ಪಾಲಿಕೆ ಸದಸ್ಯ ರವಿಚಂದ್ರ, ಮಾವಳ್ಳಿ ಶ್ರೀನಿವಾಸ್, ಅಮರ್ ನಾಥ್, ಬೈರಪ್ಪ, ನಿರಂಜನ್, ಭುವನ, ಸೋಮಣ್ಣ ಮತ್ತಿತರರು ಭಾಗವಹಿಸಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…