There are always two opinions in politics Home Minister Parameshwar
ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಪಾಲನೆಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಂ ಸ್ಟೇಗಳಲ್ಲಿ ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ಎಲ್ಲಾ ಹೋಂಸ್ಟೇ ಮಾಲೀಕರು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಒಂದು ವೇಳೆ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಹೋಂ ಸ್ಟೇಗಳು ನೋಂದಣಿಯಾಗಿರಬೇಕು. ವಿವಿಧ ಸಂಸ್ಥೆಗಳಿಂದ ಅಗತ್ಯವಿರುವ ಪರವಾನಗಿಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೊಡಗಿನಲ್ಲಿರುವ ಹೋಂಸ್ಟೆನಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಗಂಭೀರವಾದ ಪ್ರಕರಣ. ವಿದೇಶಿಯರ ಮೇಲೆ ಹೀಗಾದರೆ ಜನರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ. ದೇಶದ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಏನೆಂದು ಭಾವಿಸುತ್ತಾರೆ ಎಂದು ಪ್ರಶ್ನಿಸಿದರು.
ಘಟನೆಯ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿರಬಹುದು. ಪೊಲೀಸರು ಅದನ್ನೆಲ್ಲಾ ಗಮನಿಸುತ್ತಾರೆ. ಲೈಂಗಿಕ ದೌರ್ಜನ್ಯ ಎಸಗಿದವರು ಜಾರ್ಖಂಡ್ನವರು ಎಂದು ಹೇಳಲಾಗಿದೆ. ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…