ರಾಜ್ಯ

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ

ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಪಾಲನೆಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಂ ಸ್ಟೇಗಳಲ್ಲಿ ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ಎಲ್ಲಾ ಹೋಂಸ್ಟೇ ಮಾಲೀಕರು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಒಂದು ವೇಳೆ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಹೋಂ ಸ್ಟೇಗಳು ನೋಂದಣಿಯಾಗಿರಬೇಕು. ವಿವಿಧ ಸಂಸ್ಥೆಗಳಿಂದ ಅಗತ್ಯವಿರುವ ಪರವಾನಗಿಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಕೊಡಗಿನಲ್ಲಿರುವ ಹೋಂಸ್ಟೆನಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಗಂಭೀರವಾದ ಪ್ರಕರಣ. ವಿದೇಶಿಯರ ಮೇಲೆ ಹೀಗಾದರೆ ಜನರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ. ದೇಶದ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಏನೆಂದು ಭಾವಿಸುತ್ತಾರೆ ಎಂದು ಪ್ರಶ್ನಿಸಿದರು.

ಘಟನೆಯ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿರಬಹುದು. ಪೊಲೀಸರು ಅದನ್ನೆಲ್ಲಾ ಗಮನಿಸುತ್ತಾರೆ. ಲೈಂಗಿಕ ದೌರ್ಜನ್ಯ ಎಸಗಿದವರು ಜಾರ್ಖಂಡ್‌ನವರು ಎಂದು ಹೇಳಲಾಗಿದೆ. ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

2 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

2 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

2 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

2 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

2 hours ago