ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್ ಆರೋಪ ಮುಕ್ತಗೊಳಿಸಿದೆ.

ಇದರಿಂದಾಗಿ ಕಾನೂನು ಹೋರಾಟದಲ್ಲಿ ಎಚ್.ಡಿ ರೇವಣ್ಣಗೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ.

ತಮ್ಮ ವಿರುದ್ಧ ದಾಖಲಾಗಿರುವ ಐಪಿಸಿ ಸೆಕ್ಷನ್ 354ಎ ಸಮನ್ಸ್ ಅನ್ನು ರದ್ದುಪಡಿಸಬೇಕೆಂದು ಕೋರಿ ಹೆಚ್‍.ಡಿ ರೇವಣ್ಣ ಪರ ಬೆಂಗಳೂರಿನ ವಿಶೇಷ ಜನಪರ ಅರ್ಜಿ ಸಲ್ಲಿಸಿದ್ದರು.

ವಾದ- ಪ್ರತಿವಾದ ಆಲಿಸಿದ 42ನೇ ಎಸಿಎಂಜೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಕುಮಾರ್ ಅವರಿದ್ದ ಪೀಠ, ರೇವಣ್ಣ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್ 354 A ಅನ್ನು ರದ್ದುಪಡಿಸಿ ಪ್ರಕರಣದಿಂದ ಆರೋಪ ಮುಕ್ತಗೊಳಿಸಿತು.

ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ವಿರುದ್ಧ ದಾಖಲಾಗಿದ್ದ ಐಪಿಸಿ ಸೆಕ್ಷನ್ 354 ಸಮನ್ಸ್ ಅನ್ನು ಈ ಹಿಂದೆ ಹೈಕೋರ್ಟು ರದ್ದುಪಡಿಸಿತ್ತು. ಇದೀಗ ನ್ಯಾಯಾಲಯದಿಂದ ರೇವಣ್ಣಗೆ ಸಿಕ್ಕಿರುವುದರಿಂದ ಬಹುತೇಕ ಅವರು ಪ್ರಕರಣದಿಂದ ಮುಕ್ತರಾಗಿದ್ದಾರೆ.

ಪ್ರಕರಣ ಹಿನ್ನೆಲೆ
ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂದಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಏಪ್ರಿಲ್ 28ರಂದು ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್ 354 2, 506, 509 ರ ಅಡಿ ಪ್ರಕರಣ ದಾಖಲಿಸಲಾಗಿ, ರೇವಣ್ಣ ಮೊದಲನೇ ಆರೋಪಿ ಹಾಗೂ ಪ್ರಜ್ವಲ್ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

10 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

12 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

12 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

12 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

14 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

15 hours ago