MLA Munirathna
ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಮೂವರು ಬೆಂಬಲಿಗರ ವಿರುದ್ಧ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಾಸಕ ಮುನಿರತ್ನ, ಬೆಂಬಲಿಗರಾದ ವಸಂತ, ಚನ್ನಕೇಶವ, ಕಮಲ್ ಹಾಗೂ ಓರ್ವ ಅಪರಿಚಿತನ ವಿರುದ್ಧವೂ ದೂರು ದಾಖಲಾಗಿದೆ. ಕಳೆದ 2013ರಲ್ಲಿ ಜೆಪಿ ಪಾರ್ಕ್ನ ಶಾಸಕರ ಕಚೇರಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ ಎನ್ನಲಾಗ್ತಿದೆ. ಅಪರಿಚಿತ ವ್ಯಕ್ತಿಯಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿಸಿದ್ದರೆಂದು ದೂರಿನಲ್ಲಿ ದಾಖಲಾಗಿದೆ.
ಅತ್ಯಾಚಾರಕ್ಕೂ ಮುನ್ನ ನೀಡಿದ ಇಂಜೆಕ್ಷನ್ನಿಂದ ಈಗ ನನಗೆ ಇಡಿಆರ್ ಎಂಬ ಕಾಯಿಲೆ ಬಂದಿದೆ. ಇದರಿಂದ ಮನನೊಂದ ನಾನು ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಹಿಂದೆ ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದೆ. ಪತಿ ಬಿಟ್ಟು ಹೋಗಿದ್ದರಿಂದ ಮತ್ತೊಬ್ಬರನ್ನು ಮದುವೆ ಆಗಿ ಜೀವನ ನಡೆಸುತ್ತಿದ್ದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಹೊರಿಸಿ ನನ್ನನ್ನು ಜೈಲಿಗೆ ಕಳುಹಿಸಿದ್ದರು. ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಅವರ ಬೆಂಬಲಿಗರು ಬಂದು ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವ ಆಮಿಷವೊಡ್ಡಿದ್ದರು. ನಂತರ, ಶಾಸಕರ ಕಚೇರಿಗೆ ಕರೆದೊಯ್ದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದರು ಎಂದು ಸಂತ್ರಸ್ತೆ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…