ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಕೆಲ ಕಂಡಕ್ಟರ್ ಗಳು ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಬರೆಯುವುದು ಜೊತೆಗೆ ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈಗಾಗಿ ಕೆಎಸ್ಆರ್ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡಿದ್ದು ಕಂಡಕ್ಟರ್ ಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಬಸ್ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆ ಮಾಡಿದ್ದಲ್ಲೆ ಆದಲ್ಲಿ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ಅಲ್ಲದೆ ತಪ್ಪಿತಸ್ಥ ಕಂಡಕ್ಟರ್ ಗಳಿಗೆ ಯಾವ ರೀತಿ ಶಿಕ್ಷೆ ವಿಧಿಸಲಾಗುತ್ತದೆ ಎಂಬುವುರ ಬಗ್ಗೆ ಆದೇಶ ಹೊರಡಿಸಿದ್ದಾರೆ.
೧) ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22ರ ಅಡಿಯಲ್ಲಿ ಶಿಸ್ತು ಕ್ರಮ
೨) 2 ಕ್ಕಿಂತ ಹೆಚ್ಚಿನ ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ
೩) ಮಹಿಳಾ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ
೪) 2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ ಕ್ರಮ
೫) ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶಿಸಿದೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…