ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಕೆಲ ಕಂಡಕ್ಟರ್ ಗಳು ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಬರೆಯುವುದು ಜೊತೆಗೆ ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈಗಾಗಿ ಕೆಎಸ್ಆರ್ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡಿದ್ದು ಕಂಡಕ್ಟರ್ ಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಬಸ್ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆ ಮಾಡಿದ್ದಲ್ಲೆ ಆದಲ್ಲಿ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ಅಲ್ಲದೆ ತಪ್ಪಿತಸ್ಥ ಕಂಡಕ್ಟರ್ ಗಳಿಗೆ ಯಾವ ರೀತಿ ಶಿಕ್ಷೆ ವಿಧಿಸಲಾಗುತ್ತದೆ ಎಂಬುವುರ ಬಗ್ಗೆ ಆದೇಶ ಹೊರಡಿಸಿದ್ದಾರೆ.
೧) ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22ರ ಅಡಿಯಲ್ಲಿ ಶಿಸ್ತು ಕ್ರಮ
೨) 2 ಕ್ಕಿಂತ ಹೆಚ್ಚಿನ ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ
೩) ಮಹಿಳಾ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ
೪) 2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ ಕ್ರಮ
೫) ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶಿಸಿದೆ.
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್ಥಾಂಗ್ನಲ್ಲಿ…
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…