ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಕೆಲ ಕಂಡಕ್ಟರ್ ಗಳು ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಬರೆಯುವುದು ಜೊತೆಗೆ ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈಗಾಗಿ ಕೆಎಸ್ಆರ್ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡಿದ್ದು ಕಂಡಕ್ಟರ್ ಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಬಸ್ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆ ಮಾಡಿದ್ದಲ್ಲೆ ಆದಲ್ಲಿ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ಅಲ್ಲದೆ ತಪ್ಪಿತಸ್ಥ ಕಂಡಕ್ಟರ್ ಗಳಿಗೆ ಯಾವ ರೀತಿ ಶಿಕ್ಷೆ ವಿಧಿಸಲಾಗುತ್ತದೆ ಎಂಬುವುರ ಬಗ್ಗೆ ಆದೇಶ ಹೊರಡಿಸಿದ್ದಾರೆ.
೧) ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22ರ ಅಡಿಯಲ್ಲಿ ಶಿಸ್ತು ಕ್ರಮ
೨) 2 ಕ್ಕಿಂತ ಹೆಚ್ಚಿನ ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ
೩) ಮಹಿಳಾ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ
೪) 2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ ಕ್ರಮ
೫) ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶಿಸಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…