ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಕೆಲ ಕಂಡಕ್ಟರ್ ಗಳು ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಬರೆಯುವುದು ಜೊತೆಗೆ ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈಗಾಗಿ ಕೆಎಸ್ಆರ್ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡಿದ್ದು ಕಂಡಕ್ಟರ್ ಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಬಸ್ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆ ಮಾಡಿದ್ದಲ್ಲೆ ಆದಲ್ಲಿ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ಅಲ್ಲದೆ ತಪ್ಪಿತಸ್ಥ ಕಂಡಕ್ಟರ್ ಗಳಿಗೆ ಯಾವ ರೀತಿ ಶಿಕ್ಷೆ ವಿಧಿಸಲಾಗುತ್ತದೆ ಎಂಬುವುರ ಬಗ್ಗೆ ಆದೇಶ ಹೊರಡಿಸಿದ್ದಾರೆ.
೧) ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22ರ ಅಡಿಯಲ್ಲಿ ಶಿಸ್ತು ಕ್ರಮ
೨) 2 ಕ್ಕಿಂತ ಹೆಚ್ಚಿನ ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ
೩) ಮಹಿಳಾ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ
೪) 2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ ಕ್ರಮ
೫) ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶಿಸಿದೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…